alex Certify ಬೆಂಗಳೂರಿನಲ್ಲಿ ಅಕ್ರಮ ಗಾಂಜಾ ಸಾಗಾಟ : ಮೂವರು ಆರೋಪಿಗಳ ಬಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನಲ್ಲಿ ಅಕ್ರಮ ಗಾಂಜಾ ಸಾಗಾಟ : ಮೂವರು ಆರೋಪಿಗಳ ಬಂಧನ

ಬೆಂಗಳೂರು : ಬೆಂಗಳೂರಿನಲ್ಲಿ ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ

ಬೆಂಗಳೂರು ನಗರ ಜಿಲ್ಲೆಯ ಅಬಕಾರಿ ಉಪ ಆಯುಕ್ತರಾದ ವೀರಣ್ಣ ಬಾಗೇವಾಡಿ ಇವರ ಮಾರ್ಗದರ್ಶನದಲ್ಲಿ ಅಬಕಾರಿ ಅಧೀಕ್ಷಕರಾದ ಅಬುಬಕರ್ ಮುಜಾವರ, ಅಬಕಾರಿ ಇವರ ನೇತೃತ್ವದಲ್ಲಿ ನಗರದ ಮಹದೇವಪುರ ವ್ಯಾಪ್ತಿಯ ಹೂಡಿ ಬ್ರಿಡ್ಜ್ ಹತ್ತಿರ, ಹೂಡಿ ಕೆರೆ ಸಮೀಪದ ಅಂಖೋರ್ ಹೋಟೆಲ್ ಬಳಿ ಮತ್ತು ಹೂಡಿ ಮೆಟ್ರೋ ಸಮೀಪದ ಡಿ ಮಾರ್ಟ್ ಹತ್ತಿರದ ರಸ್ತೆಯಲ್ಲಿ ಪ್ರತ್ಯಕ್ಷ ದಾಳಿ ನಡೆಸಿ, ಅಕ್ರಮವಾಗಿ ಸಾಗಿಸುತ್ತಿದ್ದ ಒಟ್ಟು 12 ಕೆ.ಜಿ. ಒಣ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳಾದ ಅರ್ಜುನ್ ಯಾದವ್, ಲಲಿತ ಮಹತೋ ಮತ್ತು ಮೊಹಮ್ಮದ್ ಮಣ್ಣಾನ್ ಆರೋಪಿಗಳನ್ನು ಬಂಧಿಸಿ ಅವರ ವಿರುದ್ಧ ಎನ್.ಡಿ.ಪಿ.ಎಸ್ ಕಾಯ್ದೆ-1985 ರಡಿ 03 ಮೊಕದ್ದಮೆ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿರುತ್ತದೆ ಎಂದು ಬೆಂಗಳೂರು ನಗರ ಜಿಲ್ಲೆಯ-5 ಅಬಕಾರಿ ಇಲಾಖೆಯ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...