alex Certify ಪೋಷಕರಿಗೆ ಮುಖ್ಯ ಮಾಹಿತಿ : ನವೋದಯ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಷಕರಿಗೆ ಮುಖ್ಯ ಮಾಹಿತಿ : ನವೋದಯ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬಳ್ಳಾರಿ : ಕೂಡ್ಲಿಗಿ ತಾಲ್ಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿರುವ ಜವಾಹರ ನವೋದಯ ವಿದ್ಯಾಲಯದ 6ನೇ ತರಗತಿಯ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು ಅಕ್ಟೋಬರ್ 07 ರ ವರೆಗೆ ವಿಸ್ತರಿಸಲಾಗಿದೆ.

ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಅಧ್ಯಯನ ಮಾಡುತ್ತಿರುವ ಸರಕಾರಿ ಹಾಗೂ ಸರಕಾರದಿಂದ ಅನುಮತಿ ಪಡೆದ ಶಾಲೆಯ ಮಕ್ಕಳು ಮಾತ್ರ ಅರ್ಜಿ ಸಲ್ಲಿಸಬೇಕು.

ಪ್ರವೇಶ ಪರೀಕ್ಷೆಯು 2025ನೇ ಜ.01 ರಂದು ನಡೆಯಲಿದೆ. ಆಸಕ್ತರು ವೆಬ್‌ಸೈಟ್ https://navodaya.gov.in ಸಂಪರ್ಕಿಸಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.ಈಗಾಗಲೇ ಅರ್ಜಿ ಸಲ್ಲಿಸಿರುವಂತಹ ವಿದ್ಯಾರ್ಥಿಗಳು ತಮ್ಮ ಅರ್ಜಿಯಲ್ಲಿ ಲೋಪದೋಷಗಳಾಗಿದ್ದರೆ ಅ.08 ಹಾಗೂ 09 ರಂದು ತಿದ್ದುಪಡಿಗೆ ಅವಕಾಶವಿದ್ದು, ಲಿಂಗ (ಗಂಡು/ಹೆಣ್ಣು), ಜಾತಿ (ಇತರೆ/ಹಿಂದುಳಿದ ವರ್ಗ/ಪ.ಜಾ/ಪ.ಪಂ), ನಿವಾಸಿ (ಗ್ರಾಮೀಣ/ನಗರ), ದೈಹಿಕ ಅಂಗವಿಕಲತೆ ಮತ್ತು ಪರೀಕ್ಷಾ ಮಾಧ್ಯಮ ಈ ಲೋಪದೋಷಗಳನ್ನು ಮಾತ್ರ ಸರಿಪಡಿಸಿಕೊಳ್ಳಬಹುದಾಗಿದೆ ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...