alex Certify ರಾಜ್ಯದ ರೈತರ ಗಮನಕ್ಕೆ ; ಸರ್ಕಾರದ ಸೌಲಭ್ಯ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ರೈತರ ಗಮನಕ್ಕೆ ; ಸರ್ಕಾರದ ಸೌಲಭ್ಯ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ

ಬೆಂಗಳೂರು: ಸರ್ಕಾರದ ಸೌಲಭ್ಯಗಳನ್ನು ಪಡೆಯಲು ರೈತರು ತಪ್ಪದೇ ಕೆಲಸ ಮಾಡಬೇಕೆಂದು ಸರ್ಕಾರ ಸೂಚನೆ ನೀಡಿದೆ. ರೈತರು ಆರ್.ಟಿ.ಸಿ. ದಾಖಲೆಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಕಡ್ಡಾಯವಾಗಿ ಜೋಡಿಸುವಂತೆ ಸರ್ಕಾರ ಸೂಚನೆ ನೀಡಿದೆ.

ಆಧಾರ್ ಸಂಖ್ಯೆ ಜೋಡಣೆಗಾಗಿ ಹೊಸ ತಂತ್ರಾಂಶ ಸಿದ್ಧಪಡಿಸಿದ್ದು, ಇನ್ನು ಮುಂದೆ ಸರ್ಕಾರದ ಸೌಕರ್ಯ ಪಡೆಯಲು ರೈತರು ಹೊಸ ಪದ್ದತಿ ಪಾಲಿಸುವುದು ಕಡ್ಡಾಯವಾಗಿರುತ್ತದೆ. ಗ್ರಾಮ ಲೆಕ್ಕಾಧಿಕಾರಿಗಳಿಗೆ ಆರ್.ಟಿ.ಸಿ.ಗೆ ಆಧಾರ್ ಜೋಡಣೆ ಕಾರ್ಯ ಜವಾಬ್ದಾರಿ ನೀಡಲಾಗಿದೆ.

ಕೃಷಿ ಮತ್ತು ತೋಟಗಾರಿಕೆ ಇಲಾಖೆಯಲ್ಲಿ ವಿವಿಧ ಯೋಜನೆ ಸಹಾಯಧನ ಪಡೆದುಕೊಳ್ಳಲು ಫ್ರೂಟ್ ತಂತ್ರಾಂಶ ಅನುಷ್ಠಾನಗೊಂಡಿದ್ದು, ಬಹುತೇಕ ರೈತರು ಆಧಾರ್ ಸಂಖ್ಯೆಯನ್ನು ತಂತ್ರಾಂಶಕ್ಕೆ ಜೋಡಿಸಿದ್ದಾರೆ. ಈಗ ಕಂದಾಯ ಇಲಾಖೆಯ ತಂತ್ರಾಂಶಕ್ಕೆ ಆಧಾರ್ ಸಂಖ್ಯೆ ಜೋಡಿಸುವಂತೆ ಸರ್ಕಾರ ಪ್ರತ್ಯೇಕ ಸೂಚನೆ ನೀಡಿದೆ.
7 ವರ್ಷದ ಹಿಂದೆಯೇ ಕರ್ನಾಟಕ ಸರ್ಕಾರ ಆರ್ಟಿಸಿಗೆ ಆಧಾರ್ ಕಾರ್ಡ್ ಜೋಡಣೆ ಮಾಡುವ ಕಾರ್ಯವನ್ನು ಆರಂಭಿಸಿತ್ತು. ಆಗ ಹಲವು ರೈತರು ಜೋಡಣೆಯನ್ನು ಸಹ ಮಾಡಿದ್ದರು. ಆದರೆ ಈಗ ಸರ್ಕಾರದ ಸೌಲಭ್ಯಗಳು ಬೇಕು ಎಂದರೆ ಕಡ್ಡಾಯವಾಗಿ ಜೋಡಣೆ ಮಾಡಬೇಕು ಎಂದು ಸರ್ಕಾರ ಹೇಳಿದೆ. ಹೇಳಿದ್ದು,ಹೆಚ್ಚಿನ ಸಂಖ್ಯೆಯ ಹಕ್ಕುಗಳು, ಗೇಣಿದಾರರು ಮತ್ತು ಬೆಳೆಗಳ ಮಾಹಿತಿ ಸತ್ತ ರೈತರ ಹೆಸರಿನಲ್ಲಿ ಇನ್ನೂ ಇವೆ. ಸರ್ಕಾರದ ಯೋಜನೆಗಳ ಸಹಾಯವನ್ನು ಪಡೆಯಲು, ಶಾಶ್ವತ ಪರಿಹಾರದ ಅಂಗವಾಗಿ ಆರ್ಟಿಸಿ, ಆಧಾರ್ ಲಿಂಕ್ ಮಾಡಲು ಸೂಚನೆ ನೀಡಲಾಗಿದೆ.

ಸರಳ ತಂತ್ರಾಂಶದಲ್ಲಿ ರೈತರ ಆರ್.ಟಿ.ಸಿ. ದಾಖಲೆಗೆ ಆಧಾರ್ ಸಂಖ್ಯೆ ಜೋಡಿಸುವ ಕಾರ್ಯದ ಜವಾಬ್ದಾರಿಯನ್ನು ಗ್ರಾಮ ಲೆಕ್ಕಾಧಿಕಾರಿಗೆ ವಹಿಸಲಾಗಿದೆ. ರೈತರಿಗೆ ಸೂಕ್ತ ತಿಳಿವಳಿಕೆ ನೀಡಿ ಆಧಾರ್ ಸಂಖ್ಯೆ ಪಡೆದು ಆರ್ಟಿಸಿ ದಾಖಲೆಗೆ ವಿವರವಾದ ಮಾಹಿತಿಯೊಂದಿಗೆ ಜೋಡಿಸುವಂತೆ ಸರ್ಕಾರದಿಂದ ಆದೇಶ ನೀಡಲಾಗಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...