alex Certify ಪ್ರತಿ ಭಾರತೀಯನಿಗೂ ಖುಷಿ ಸುದ್ದಿ ತಂದಿದೆ ಆಗಸ್ಟ್ ತಿಂಗಳು: ಮೋದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿ ಭಾರತೀಯನಿಗೂ ಖುಷಿ ಸುದ್ದಿ ತಂದಿದೆ ಆಗಸ್ಟ್ ತಿಂಗಳು: ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ, ಭಾರತೀಯರಿಗೆ ಖುಷಿ ಸುದ್ದಿ ನೀಡಿದ್ದಾರೆ. ಟ್ವೀಟ್ ಮೂಲಕ ಮೋದಿ ಖುಷಿ ಸುದ್ದಿ ಹಂಚಿಕೊಂಡಿದ್ದಾರೆ. ಆಗಸ್ಟ್ ಆರಂಭ ಆಹ್ಲಾದಕರವಾಗಿದೆ ಎಂದವರು ಹೇಳಿದ್ದಾರೆ. ಮತ್ತೊಂದು ಟ್ವೀಟ್‌ನಲ್ಲಿ, ಒಲಿಂಪಿಕ್ಸ್ ನಲ್ಲಿ ಭಾರತೀಯ ಆಟಗಾರರ ಪ್ರದರ್ಶನವನ್ನು ಶ್ಲಾಘಿಸಿದ್ದಾರೆ. 130 ಕೋಟಿ ಭಾರತೀಯರು ಭಾರತವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಶ್ರಮಿಸುತ್ತಿದ್ದಾರೆ ಎಂದಿದ್ದಾರೆ.

ಭಾರತವು ಆಗಸ್ಟ್ ತಿಂಗಳಿಗೆ ಪ್ರವೇಶಿಸುತ್ತಿದ್ದಂತೆ ಅಮೃತ್ ಮಹೋತ್ಸವದ ಆರಂಭವಾಗಿದೆ. ಪ್ರತಿಯೊಬ್ಬ ಭಾರತೀಯನಿಗೂ ಆಹ್ಲಾದಕರವಾದ ಇಂತಹ ಅನೇಕ ಘಟನೆಗಳನ್ನು ನಾವು ನೋಡಿದ್ದೇವೆ. ದಾಖಲೆಯ ವ್ಯಾಕ್ಸಿನೇಷನ್, ಹೆಚ್ಚಿದ ಜಿಎಸ್‌ಟಿ ಸಂಖ್ಯೆಗಳು ಬಲವಾದ ಆರ್ಥಿಕ ಚಟುವಟಿಕೆಯನ್ನು ಸೂಚಿಸುತ್ತಿವೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್ ನಲ್ಲಿ, ಪಿವಿ ಸಿಂಧು ಕೇವಲ ಒಂದು ಅರ್ಹ ಪದಕ ಗೆದ್ದಿಲ್ಲ. ಪುರುಷರು ಮತ್ತು ಮಹಿಳೆಯರ ಹಾಕಿ ತಂಡಗಳ ಐತಿಹಾಸಿಕ ಪ್ರಯತ್ನಗಳನ್ನು ಒಲಿಂಪಿಕ್ಸ್ ನಲ್ಲಿ ನೋಡಿದ್ದೇವೆ. 130 ಕೋಟಿ ಭಾರತೀಯರು, ಭಾರತವನ್ನು ಮುನ್ನಡೆಸುತ್ತಿದ್ದಾರೆ. ದೇಶವು ಅಮೃತ್ ಮಹೋತ್ಸವವನ್ನು ಆಚರಿಸುತ್ತಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Forskellen mellem de to katte: Kun et geni kunne svare Tre overraskende produkter Et synstestspil: Kan du finde Opskriftshemmeligheder afsløres: Erstatningsmuligheder for salatprodukter "Kun 1 % af