alex Certify BIG NEWS: ರಷ್ಯಾ-ಉಕ್ರೇನ್ ಯುದ್ಧದಲ್ಲಿ ಭಾರತ ಎಂದಿಗೂ ತಟಸ್ಥವಾಗಿಲ್ಲ, ಶಾಂತಿಯ ಪರ: ಝೆಲೆನ್ಸ್ಕಿಗೆ ಪ್ರಧಾನಿ ಮೋದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಷ್ಯಾ-ಉಕ್ರೇನ್ ಯುದ್ಧದಲ್ಲಿ ಭಾರತ ಎಂದಿಗೂ ತಟಸ್ಥವಾಗಿಲ್ಲ, ಶಾಂತಿಯ ಪರ: ಝೆಲೆನ್ಸ್ಕಿಗೆ ಪ್ರಧಾನಿ ಮೋದಿ

ನವದೆಹಲಿ: ಮಾನವೀಯ ನೆರವಿಗಾಗಿ ಭಾರತ ಸದಾ ಉಕ್ರೇನ್‌ನೊಂದಿಗೆ ನಿಲ್ಲುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್‌ಕಿ ಅವರಿಗೆ ತಿಳಿಸಿದ್ದಾರೆ.

ಯುಕ್ರೇನ್ ಮತ್ತು ರಷ್ಯಾ ನಡುವಿನ ಶಾಂತಿ ಪ್ರಯತ್ನಗಳಲ್ಲಿ ಅವರು “ಸಕ್ರಿಯ ಪಾತ್ರ” ವಹಿಸುವ ಬಗ್ಗೆ ಪ್ರಸ್ತಾಪಿಸಿದ್ದಾರೆ.

ಯುದ್ಧದ ಆರಂಭಿಕ ದಿನಗಳಲ್ಲಿ ಉಕ್ರೇನ್‌ನಿಂದ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ನೀಡಿದ ಸಹಾಯಕ್ಕಾಗಿ ಝೆಲೆನ್ಸ್‌ಕಿ ಅವರಿಗೆ ಧನ್ಯವಾದ ಅರ್ಪಿಸಿದ ಪ್ರಧಾನಮಂತ್ರಿಯವರು ಮತ್ತು ಮಾನವೀಯತೆಗಾಗಿ ಭಾರತವು ಯಾವಾಗಲೂ ಉಕ್ರೇನ್‌ನೊಂದಿಗೆ ನಿಲ್ಲುತ್ತದೆ ಎಂದು ಭರವಸೆ ನೀಡಿದ್ದಾರೆ.

ಯುದ್ಧದ ಆರಂಭಿಕ ದಿನಗಳಲ್ಲಿ ನೀವು ಭಾರತೀಯ ಪ್ರಜೆಗಳು ಮತ್ತು ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವಲ್ಲಿ ಸಹಾಯ ಮಾಡಿದ್ದೀರಿ. ಈ ಬಿಕ್ಕಟ್ಟಿನ ಸಮಯದಲ್ಲಿ ನಿಮ್ಮ ಸಹಾಯಕ್ಕಾಗಿ ನಾನು ನಿಮಗೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಯುದ್ಧದ ಸಮಯದಲ್ಲಿ ನಾವು ಎರಡು ಪಾತ್ರಗಳನ್ನು ನಿರ್ವಹಿಸಿದ್ದೇವೆ ಎಂದು ಜಗತ್ತಿಗೆ ಚೆನ್ನಾಗಿ ತಿಳಿದಿದೆ. ಮೊದಲ ಪಾತ್ರವು ಮಾನವೀಯ ದೃಷ್ಟಿಕೋನವಾಗಿತ್ತು. ಮಾನವೀಯ ದೃಷ್ಟಿಕೋನದಿಂದ ಯಾವುದೇ ಅಗತ್ಯವಿದ್ದರೂ ಭಾರತವು ಯಾವಾಗಲೂ ನಿಮ್ಮೊಂದಿಗೆ ನಿಲ್ಲುತ್ತದೆ ಮತ್ತು ಎರಡು ಹೆಜ್ಜೆ ಮುಂದೆ ಇರುತ್ತದೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದು ಮೋದಿ ಹೇಳಿದ್ದಾರೆ.

ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದಿಂದ ಭಾರತ ದೂರ ಉಳಿದಿದೆ. ಆದರೆ ಅದು “ಎಂದಿಗೂ ತಟಸ್ಥ” ಮತ್ತು ಯಾವಾಗಲೂ ಶಾಂತಿಯ ಪರವಾಗಿದೆ ಎಂದು ಒತ್ತಿ ಹೇಳಿದ್ದಾರೆ.

ನಾವು ಅಳವಡಿಸಿಕೊಂಡ ಎರಡನೇ ಮಾರ್ಗವೆಂದರೆ ಯುದ್ಧದಿಂದ ದೂರವಿರುವುದು. ನಾವು ದೃಢವಾಗಿ ಯುದ್ಧದಿಂದ ದೂರವಿದ್ದೇವೆ. ಆದರೆ ನಾವು ತಟಸ್ಥರಾಗಿದ್ದೇವೆ ಎಂದು ಅರ್ಥವಲ್ಲ. ನಾವು ಎಂದಿಗೂ ತಟಸ್ಥರಾಗಿರಲಿಲ್ಲ. ನಾವು ಮೊದಲ ದಿನದಿಂದ ಶಾಂತಿಯ ಪರವಾಗಿ ಇದ್ದೇವೆ. ಶಾಂತಿಯ ಸಂದೇಶದೊಂದಿಗೆ ಉಕ್ರೇನ್‌ನ ಮಣ್ಣಿಗೆ ಬಂದಿದ್ದೇವೆ ಎಂದು ಪ್ರಧಾನಿ ಮೋದಿ ಝೆಲೆನ್ಸ್‌ಕಿಯವರಿಗೆ ತಿಳಿಸಿದ್ದಾರೆ.

ತಮ್ಮ ಇತ್ತೀಚಿನ ರಷ್ಯಾ ಭೇಟಿ ಪ್ರಸ್ತಾಪಿಸಿದ ಪ್ರಧಾನಿಯವರು, ಅಧ್ಯಕ್ಷ ಪುಟಿನ್ ಅವರನ್ನು ಭೇಟಿಯಾಗಿ ಯುದ್ಧಭೂಮಿಯಲ್ಲಿ ಯಾವುದೇ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಹಿಡಿಯಲಾಗುವುದಿಲ್ಲ. ಎರಡೂ ದೇಶಗಳು ಚರ್ಚೆ ನಡೆಸಿ ಪ್ರಸ್ತುತ ಬಿಕ್ಕಟ್ಟಿನಿಂದ ಹೊರಬರುವ ಮಾರ್ಗವನ್ನು ಕಂಡುಕೊಳ್ಳಬೇಕು ಎಂದು ಹೇಳಿದ್ದಾಗಿ ತಿಳಿಸಿದ್ದಾರೆ.

ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸುವುದು ಭಾರತದ ಬದ್ಧತೆ ಎಂದು ನಾನು ನಿಮಗೆ ಮತ್ತು ಜಾಗತಿಕ ಸಮುದಾಯಕ್ಕೆ ಭರವಸೆ ನೀಡಲು ಬಯಸುತ್ತೇನೆ. ರಣರಂಗದಲ್ಲಿ ಯಾವುದೇ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ ಮತ್ತು ಎರಡೂ ಕಡೆಯವರು ಕುಳಿತುಕೊಂಡು ಚರ್ಚೆ ನಡೆಸುವಲ್ಲಿ ಮುನ್ನಡೆಯಬೇಕು. ಈ ಬಿಕ್ಕಟ್ಟಿನಿಂದ ಹೊರಬರಲು ಮಾರ್ಗಗಳನ್ನು ಕಂಡುಕೊಳ್ಳಬೇಕು ಎಂದು ಹೇಳಿದ್ದಾರೆ.

ಶಾಂತಿ ಪ್ರಯತ್ನಗಳಲ್ಲಿ ಭಾರತವು ತನ್ನ ಸಕ್ರಿಯ ಪಾತ್ರವನ್ನು ವಹಿಸಲು ಸಿದ್ಧವಾಗಿದೆ ಎಂದು ನಾನು ನಿಮಗೆ ಭರವಸೆ ನೀಡಲು ಬಯಸುತ್ತೇನೆ. ವೈಯಕ್ತಿಕವಾಗಿ ನಾನು ಕೊಡುಗೆ ನೀಡಲು ಸಾಧ್ಯವಾದರೆ, ಖಂಡಿತವಾಗಿಯೂ ಸ್ನೇಹಿತನಾಗಿ ಅದನ್ನು ಮಾಡಲು ಬಯಸುತ್ತೇನೆ ಎಂದು ಮೋದಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...