alex Certify ʼನಮ್ಮ ಸೇನೆ ದೇಶದ ಒಂದಿಂಚು ಜಾಗವನ್ನೂ ಬಿಟ್ಟು ಕೊಡಲ್ಲʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼನಮ್ಮ ಸೇನೆ ದೇಶದ ಒಂದಿಂಚು ಜಾಗವನ್ನೂ ಬಿಟ್ಟು ಕೊಡಲ್ಲʼ

ನವದೆಹಲಿ: ಆಯುಧ ಪೂಜೆ ಹಿನ್ನೆಲೆಯಲ್ಲಿ ಡಾರ್ಜಿಲಿಂಗ್ ನ ಸುಕ್ಮಾ ಆರ್ಮಿ ಕ್ಯಾಂಪ್ ಗೆ ಭೇಟಿ ನೀಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಶಸ್ತ್ರಾಸ್ತ್ರಗಳ ಪೂಜೆ ನೆರವೇರಿಸಿದರು. ಬಳಿಕ ಸುಕ್ಮಾ ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮರಿಗೆ ಗೌರವ ಸಲ್ಲಿಸಿದರು.

ಈ ವೇಳೆ ಮಾತನಾಡಿದ ರಕ್ಷಣಾ ಸಚಿವ, ನಮ್ಮ ಸೇನೆ ದೇಶದ ಒಂದಿಂಚೂ ಜಾಗ ಬಿಟ್ಟುಕೊಡುವುದಿಲ್ಲ. ಭಾರತ-ಚೀನಾ ಗಡಿ ಉದ್ವಿಗ್ನತೆ ಕಡಿಮೆಯಾಗಬೇಕು. ಭಾರತ ನೆರೆ ದೇಶಗಳೊಂದಿಗೆ ಸದಾ ಸೌಹಾರ್ದ ಸಂಬಂಧ ಹೊಂದಿರಲು ಬಯಸುತ್ತದೆ ಎಂದು ತಿಳಿಸಿದರು.

ಭಾರತ ಎಂದಿಗೂ ಯುದ್ಧ, ಸಂಘರ್ಷ ಬಯಸುವುದಿಲ್ಲ. ಆದರೆ ಕೆಲ ಸಂದರ್ಭಗಳಲ್ಲಿ ಎದುರಾಗುವ ಸನ್ನಿವೇಶಗಳಿಂದಾಗಿ ದೇಶಕ್ಕಾಗಿ ಸೈನಿಕರು ತ್ಯಾಗ ಮಾಡಬೇಕಾಗುತ್ತದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...