alex Certify ಅವಿರೋಧವಾಗಿ ಆಯ್ಕೆಯಾಗುವ ಮೂಲಕ ನಿರಾಳರಾದ ಉದ್ಧವ್ ಠಾಕ್ರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅವಿರೋಧವಾಗಿ ಆಯ್ಕೆಯಾಗುವ ಮೂಲಕ ನಿರಾಳರಾದ ಉದ್ಧವ್ ಠಾಕ್ರೆ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ಶಿವಸೇನೆಯ ಉದ್ಧವ್ ಠಾಕ್ರೆ, ಕಾಂಗ್ರೆಸ್ ಹಾಗೂ ಎನ್.ಸಿ.ಪಿ. ಜೊತೆಗೂಡಿ ಮೈತ್ರಿಕೂಟ ರಚಿಸಿಕೊಂಡಿದ್ದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.

ಆದರೆ ಉದ್ಧವ್ ಠಾಕ್ರೆ ವಿಧಾನಸಭೆಯ ಯಾವುದೇ ಸದನದ ಸದಸ್ಯರಾಗಿರದಿದ್ದ ಕಾರಣ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಆರು ತಿಂಗಳೊಳಗಾಗಿ ಯಾವುದೇ ಒಂದು ಸದನದ ಸದಸ್ಯರಾಗಿ ಆಯ್ಕೆಯಾಗಬೇಕಿತ್ತು.

ವಿಧಾನಪರಿಷತ್ತಿಗೆ ಚುನಾವಣೆ ನಿಗದಿಯಾಗಿದ್ದರೂ ಸಹ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಮುಂದೂಡಿಕೆಯಾಗಿತ್ತು. ಹೀಗಾಗಿ ಮಹಾರಾಷ್ಟ್ರದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಎದುರಾಗಬಹುದೆಂಬ ಆತಂಕ ಉಂಟಾಗಿತ್ತು.

ಬಳಿಕ ಪರಿಷತ್ ಚುನಾವಣೆ ನಡೆಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಲಾಗಿದ್ದು, ಅದರಂತೆ ಒಂಬತ್ತು ವಿಧಾನಪರಿಷತ್ ಸ್ಥಾನಗಳಿಗಾಗಿ ಚುನಾವಣೆ ಘೋಷಣೆಯಾಗಿತ್ತು.

ಇದೀಗ ಈ 9 ಸ್ಥಾನಗಳಿಗೆ ಉದ್ಧವ್ ಠಾಕ್ರೆ ಸೇರಿದಂತೆ 9 ಮಂದಿ ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಸಿರುವ ಕಾರಣ ಎಲ್ಲರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ ಉದ್ಧವ್ ಠಾಕ್ರೆ ಅವರ ಮುಖ್ಯಮಂತ್ರಿ ಸ್ಥಾನ ಅಬಾಧಿತವಾಗಿ ಮುಂದುವರೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...