alex Certify ‘ಆಪರೇಷನ್ ಕಮಲ’ ಭೀತಿಯ ಹಿನ್ನೆಲೆಯಲ್ಲಿ ಕೈ ಶಾಸಕರು ರೆಸಾರ್ಟ್ ಗೆ ಶಿಫ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಆಪರೇಷನ್ ಕಮಲ’ ಭೀತಿಯ ಹಿನ್ನೆಲೆಯಲ್ಲಿ ಕೈ ಶಾಸಕರು ರೆಸಾರ್ಟ್ ಗೆ ಶಿಫ್ಟ್

ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಗುಜರಾತ್ ನ ಮೂವರು ಕಾಂಗ್ರೆಸ್ ಶಾಸಕರನ್ನು ಸೆಳೆದುಕೊಳ್ಳಲು ಯಶಸ್ವಿಯಾಗಿರುವ ಬಿಜೆಪಿ, ಈಗ ರಾಜಸ್ಥಾನದಲ್ಲೂ ಆಪರೇಷನ್ ಕಮಲಕ್ಕೆ ‘ಕೈ’ ಹಾಕಿದೆ ಎಂದು ಹೇಳಲಾಗಿದೆ.

ಈ ಹಿನ್ನಲೆಯಲ್ಲಿ ಆತಂಕಗೊಂಡಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ತುರ್ತು ಸಭೆ ಕರೆದು ಚರ್ಚೆ ನಡೆಸಿದ್ದು, ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆಂಬ ಶಂಕೆ ಇರುವ 17 ಕಾಂಗ್ರೆಸ್ ಶಾಸಕರನ್ನು ರೆಸಾರ್ಟ್ ಗೆ ಶಿಫ್ಟ್ ಮಾಡಲಾಗಿದೆ.

ಜೊತೆಗೆ ಕಾಂಗ್ರೆಸ್ ಶಾಸಕ ಹಾಗೂ ಮುಖ್ಯ ಸಚೇತಕ ಮಹೇಶ್ ಜೋಶಿ, ತಮ್ಮ ಪಕ್ಷದ ಶಾಸಕರನ್ನು ಸೆಳೆಯಲು ಬಿಜೆಪಿ ಕುದುರೆ ವ್ಯಾಪಾರಕ್ಕೆ ಮುಂದಾಗಿದೆ ಎಂದು ದೂರಿ ಭ್ರಷ್ಟಾಚಾರ ನಿಗ್ರಹ ದಳ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...