alex Certify ಊರಿಗೆ ಹೋಗ್ತಿರುವ ಕೂಲಿ ಕಾರ್ಮಿಕರಿಗೆ ಖುಷಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಊರಿಗೆ ಹೋಗ್ತಿರುವ ಕೂಲಿ ಕಾರ್ಮಿಕರಿಗೆ ಖುಷಿ ಸುದ್ದಿ

ಕೊರೊನಾ ವೈರಸ್ ಸೋಂಕಿನ ಮಧ್ಯೆಯೇ ಕೂಲಿ ಕಾರ್ಮಿಕರನ್ನು ತವರಿಗೆ ಕಳುಹಿಸುವ ಕೆಲಸವನ್ನು ಕೇಂದ್ರ ಸರ್ಕಾರ ಶುರು ಮಾಡಿದೆ. ಕೇಂದ್ರ ಸರ್ಕಾರ ರೈಲಿನ ಶುಲ್ಕವನ್ನು ಕೂಲಿ ಕಾರ್ಮಿಕರಿಂದಲೇ ಪಡೆಯುತ್ತಿದೆ. ಇದು ರಾಜಕೀಯ ವಾಗ್ಯುದ್ಧಕ್ಕೆ ಕಾರಣವಾಗಿದೆ. ಈ ಮಧ್ಯೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮಹತ್ವದ ಘೋಷಣೆ ಮಾಡಿದ್ದಾರೆ. ಸೋನಿಯಾ ಗಾಂಧಿ ಅಗತ್ಯವಿರುವ ಎಲ್ಲ ಕಾರ್ಮಿಕರ ರೈಲ್ವೆ ಟಿಕೆಟ್ ವೆಚ್ಚವನ್ನು ಕಾಂಗ್ರೆಸ್ ಭರಿಸಲಿದೆ ಎಂದಿದ್ದಾರೆ.

ರಾಜ್ಯ ಕಾಂಗ್ರೆಸ್ ಸಮಿತಿಯ ಪ್ರತಿಯೊಂದು ಘಟಕವು ಕಾರ್ಮಿಕರ ರೈಲು ಪ್ರಯಾಣದ ಟಿಕೆಟ್ ವೆಚ್ಚವನ್ನು ಭರಿಸಲಿದೆ ಎಂದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನಿರ್ಧರಿಸಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

ಸೋಮವಾರ ಬಿಡುಗಡೆ ಮಾಡಿದ ಪತ್ರಿಕಾ ವರದಿಯಲ್ಲಿ  ಈ ಬಗ್ಗೆ ಹೇಳಲಾಗಿದೆ. ಲಾಕ್ ಡೌನ್ ಗೂ ಮೊದಲು ಯಾವುದೇ ಸೂಚನೆ ನೀಡದೆ ನಿರ್ಧಾರ ತೆಗೆದುಕೊಂಡ ಕಾರಣ ಕಾರ್ಮಿಕರಿಗೆ ತೊಂದರೆಯಾಗಿದೆ. 1947ರ ನಂತ್ರ ಇದೇ ಮೊದಲ ಬಾರಿ ಕಾರ್ಮಿಕರು ಸಾವಿರಾರು ಕಿಲೋಮೀಟರ್ ನಡೆದಿದ್ದಾರೆ. ಸರ್ಕಾರದ ನಿರ್ಧಾರ ಸಾಕಷ್ಟು ತೊಂದರೆಯನ್ನುಂಟು ಮಾಡಿದೆ ಎಂದು ಕಾಂಗ್ರೆಸ್ ಹೇಳಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...