alex Certify ಎನ್ ಕೌಂಟರ್: ಮೂವರು ಉಗ್ರರನ್ನು ಸದೆಬಡಿದ ಸೇನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎನ್ ಕೌಂಟರ್: ಮೂವರು ಉಗ್ರರನ್ನು ಸದೆಬಡಿದ ಸೇನೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದ್ದು, ತಡರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಭದ್ರತಾ ಪಡೆ ಯಶಸ್ವಿಯಾಗಿದೆ.

ಕಳೆದ ಎರಡು ದಿನಗಳಿಂದಲೂ ಕಾಶ್ಮೀರದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಭದ್ರತಾ ಪಡೆ ಸಿಬ್ಬಂದಿ ಕೂಡ ಸಾವನ್ನಪ್ಪಿದ್ದಾರೆ. ಇದೀಗ ತಡರಾತ್ರಿ ಪಂತಚೌಕ್ ನಲ್ಲಿ ನಡೆದ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಸದೆಬಡಿಯಲಾಗಿದೆ.

ಶ್ರೀನಗರದ ಬಳಿ ಪೊಲೀಸರು ಹಾಗೂ ಸಿಆರ್ ಪಿಎಫ್ ಸಿಬ್ಬಂದಿ ಮೇಲೆ ಉಗ್ರರು ದಾಳಿ ಆರಂಭಿಸಿದ್ದರು. ತಕ್ಷಣ ಆ ಪ್ರದೇಶವನ್ನು ಸುತ್ತುವರಿದ ಪೊಲೀಸರು ಉಗ್ರರಿಗಾಗಿ ಶೋಧ ಆರಂಭಿಸಿದ್ದರು. ರಾತ್ರಿ ವೇಳೆಗೆ ಮೂವರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ. ಇನ್ನೂ ಕೂಡ ಕಾರ್ಯಾಚರಣೆ ಮುಂದುವರೆದಿದೆ ಎಂದು ಭದ್ರತಾ ಪಡೆ ಮೂಲಗಳು ತಿಳಿಸಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...