ಕೊರೊನಾ ವೈರಸ್ ನಿಯಂತ್ರಣಕ್ಕೆ ದೇಶದಲ್ಲಿ ಕಳೆದ ಒಂದು ತಿಂಗಳಿಂದ ಲಾಕ್ ಡೌನ್ ಜಾರಿಯಲ್ಲಿದೆ. ಮೇ.3ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಘೋಷಣೆ ಮಾಡಿರುವ ಎರಡನೇ ಹಂತದ ಲಾಕ್ ಡೌನ್ ಮುಗಿಯಲಿದೆ. ಇದಾದ್ಮೇಲೆ ಮುಂದೇನು ಎಂಬ ಪ್ರಶ್ನೆ ಎಲ್ಲರನ್ನು ಕಾಡ್ತಿದೆ.
ಇಂದು ಪ್ರಧಾನಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದೆ. ಸಭೆಯಲ್ಲಿ ಲಾಕ್ ಡೌನ್ ಮುಂದುವರೆಸುವಂತೆ ಸಲಹೆಗಳು ಕೇಳಿ ಬಂದಿವೆ. ಈ ಮಧ್ಯೆ ಮೋದಿ ಏಪ್ರಿಲ್ 27ರಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲ ಸಿಎಂಗಳ ಜೊತೆ ಮಾತುಕತೆ ನಡೆಸಿ, ಕೊರೊನಾ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.
ಸಿಎಂಗಳ ಸಭೆ ನಂತ್ರ ಮೋದಿ ಮುಂದಿನ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ. ಸಭೆಯಲ್ಲಿಂದು ಮೇ.15ರವರೆಗೆ ಲಾಕ್ ಡೌನ್ ವಿಸ್ತರಿಸುವಂತೆ ಸಲಹೆ ನೀಡಲಾಗಿದೆ ಎನ್ನಲಾಗ್ತಿದೆ.