ದೇಶದಲ್ಲಿ ವಕ್ಕರಿಸಿಕೊಂಡಿರುವ ಕರೋನಾ ಮಹಾಮಾರಿ ತನ್ನ ಅಟ್ಟಹಾಸವನ್ನು ಮೆರೆಯುತ್ತಿದ್ದು ಇದಕ್ಕೆ ಈಗಾಗಲೇ 947 ಮಂದಿ ಬಲಿಯಾಗಿದ್ದಾರೆ. 30 ಸಾವಿರಕ್ಕೂ ಅಧಿಕ ಮಂದಿ ಸೋಂಕು ಪೀಡಿತರಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗಿದೆ.
ಕರೋನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ಡೌನ್ ಜಾರಿಗೊಳಿಸಿದ್ದು, ಇದರ ಪರಿಣಾಮವಾಗಿ ಆರ್ಥಿಕ ಚಟುವಟಿಕೆಗಳು ಸಂಪೂರ್ಣವಾಗಿ ಸ್ತಬ್ಧವಾಗಿದೆ. ಹೀಗಾಗಿ ಆರ್ಥಿಕ ಸಂಕಷ್ಟ ಎದುರಾಗಿದ್ದು, ಇದರ ಮಧ್ಯೆ ಮತ್ತೊಂದು ಶಾಕಿಂಗ್ ಸಂಗತಿ ಬಹಿರಂಗವಾಗಿದೆ.
ಪ್ರಸಕ್ತ ಎದುರಾಗಿರುವ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಉದ್ಯಮ ವಲಯ ತೀವ್ರ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಪ್ರತಿ ಹತ್ತು ಜನರಲ್ಲಿ ಒಬ್ಬರು ಉದ್ಯೋಗ ಕಳೆದುಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.
ಮುಂದಿನ ಮೂರರಿಂದ ಆರು ತಿಂಗಳ ಅವಧಿಯಲ್ಲಿ ಶೇಕಡಾ 10 ರಷ್ಟು ಕೆಲಸಗಾರರು ತಮ್ಮ ಉದ್ಯೋಗ ಕಳೆದುಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ನಿರುದ್ಯೋಗ ಪ್ರಮಾಣ ತೀವ್ರವಾಗಿ ಏರಿಕೆಯಾಗಲಿದೆ ಎನ್ನಲಾಗಿದೆ.