alex Certify ಕೇಂದ್ರ ಸರ್ಕಾರ ಮತ್ತೆ ಶುರು ಮಾಡಿದೆ ಪಿಂಚಣಿ ಯೋಜನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇಂದ್ರ ಸರ್ಕಾರ ಮತ್ತೆ ಶುರು ಮಾಡಿದೆ ಪಿಂಚಣಿ ಯೋಜನೆ

ಕೇಂದ್ರ ಸರ್ಕಾರ ಮತ್ತೊಮ್ಮೆ ಪ್ರಧಾನ ಮಂತ್ರಿ ವಯ ವಂದನಾ ವಿಶೇಷ ಪಿಂಚಣಿ ಯೋಜನೆಯನ್ನು ಪ್ರಾರಂಭಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಪಿಎಂವಿವಿವೈ ಯೋಜನೆ  ಮಾರ್ಚ್ 31ರಂದು ಕೊನೆಗೊಂಡಿತ್ತು. ಆದರೆ ಈಗ ಸರ್ಕಾರ ಇದನ್ನು ಮತ್ತೊಮ್ಮೆ ಪ್ರಾರಂಭಿಸಿ ಮೂರು ವರ್ಷಗಳವರೆಗೆ ವಿಸ್ತರಿಸಿದೆ. ಈ ಯೋಜನೆಗೆ ಸೇರಲು ಮಾರ್ಚ್ 2023 ರವರೆಗೆ ಅವಕಾಶವಿದೆ. ಪ್ರಧಾನ ಮಂತ್ರಿ ವಯ ವಂದನ ಯೋಜನೆಯಡಿ ವೃದ್ಧರಿಗೆ ಪಿಂಚಣಿ ವ್ಯವಸ್ಥೆ ಮಾಡಲಾಗಿದೆ. ಈ ಯೋಜನೆಯನ್ನು ಎಲ್ಐಸಿ ಅಡಿಯಲ್ಲಿ ಇರಿಸಲಾಗಿದೆ.

ಪಿಂಚಣಿಗಾಗಿ, ಹೂಡಿಕೆದಾರರು ನಿಗದಿತ ದಿನಾಂಕ, ಬ್ಯಾಂಕ್ ಖಾತೆ ಮತ್ತು ಅವಧಿಯನ್ನು ಆರಿಸಬೇಕಾಗುತ್ತದೆ. ಉದಾಹರಣೆಗೆ, ಪ್ರತಿ ತಿಂಗಳು 15ನೇ ತಾರೀಕಿನಂದು ಪಿಂಚಣಿ ಬಯಸಿದರೆ, ಈ ದಿನಾಂಕವನ್ನು ಆಯ್ಕೆ ಮಾಡಬೇಕಾಗುತ್ತದೆ. ಅಂತೆಯೇ, ಹೂಡಿಕೆದಾರರು ಅವರು ಬಯಸಿದರೆ ಪಿಂಚಣಿ ಆಯ್ಕೆಯನ್ನು ಸಹ ಆರಿಸಿಕೊಳ್ಳಬಹುದು. ಇದರರ್ಥ ನೀವು ಮಾಸಿಕ, ತ್ರೈಮಾಸಿಕ, ಅರ್ಧ ವಾರ್ಷಿಕ ಅಥವಾ ವಾರ್ಷಿಕ ಪಿಂಚಣಿ ಬಯಸಿದರೆ, ನೀವು ಈ ಆಯ್ಕೆಯನ್ನು ಆರಿಸಿಕೊಳ್ಳಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...