alex Certify ‘ಕೊರೊನಾ’ದಿಂದ ಕಂಗೆಟ್ಟ ಸಾರ್ವಜನಿಕರಿಗೆ ಇಲ್ಲಿದೆ ಭರ್ಜರಿ ಗುಡ್ ನ್ಯೂಸ್…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕೊರೊನಾ’ದಿಂದ ಕಂಗೆಟ್ಟ ಸಾರ್ವಜನಿಕರಿಗೆ ಇಲ್ಲಿದೆ ಭರ್ಜರಿ ಗುಡ್ ನ್ಯೂಸ್…!

ಭಾರತದಲ್ಲಿ ಕಾಣಿಸಿಕೊಂಡಿರುವ ಕೊರೊನಾ ಸೋಂಕು ದಿನೇ ದಿನೇ ವ್ಯಾಪಕವಾಗುತ್ತಿದ್ದು, ಈಗಾಗಲೇ ಸಾವಿರಾರು ಮಂದಿ ಮೃತಪಟ್ಟಿದ್ದಾರೆ. 29 ಲಕ್ಷಕ್ಕೂ ಅಧಿಕ ಮಂದಿ ಸೋಂಕು ಪೀಡಿತರಾಗಿದ್ದು, ಈ ಮಹಾಮಾರಿ ತೊಲಗುವುದು ಯಾವಾಗ ಎಂಬ ಆತಂಕದಲ್ಲಿ ಸಾರ್ವಜನಿಕರಿದ್ದಾರೆ.

ಕೊರೊನಾ ಸೋಂಕಿಗೆ ಲಸಿಕೆ ಕಂಡು ಹಿಡಿಯಲು ವಿಶ್ವದ ಎಲ್ಲಾ ರಾಷ್ಟ್ರಗಳು ನಿರಂತರ ಪ್ರಯತ್ನ ನಡೆಸಿದ್ದು, ಈ ವಿಚಾರದಲ್ಲಿ ರಷ್ಯಾ ಸಾಕಷ್ಟು ಯಶಸ್ಸು ಸಾಧಿಸಿದೆ ಎಂದು ಹೇಳಲಾಗುತ್ತಿದೆ. ಇದರ ಮಧ್ಯೆ ಭಾರತದಲ್ಲಿನ ಸೋಂಕು ಹರಡುವಿಕೆ ಕುರಿತು ಮಹತ್ವದ ಮಾಹಿತಿ ಬಹಿರಂಗವಾಗಿದೆ.

ಮುಂದಿನ ಎರಡು ವಾರಗಳಲ್ಲಿ ಕೊರೊನಾ ದೇಶದಲ್ಲಿ ಗರಿಷ್ಠ ಮಟ್ಟ ತಲುಪಲಿದೆ ಎನ್ನಲಾಗಿದ್ದು, ಆ ಬಳಿಕ ಸೋಂಕಿನ ಪ್ರಮಾಣ ಇಳಿಕೆಯಾಗಲಿದೆ ಎನ್ನಲಾಗಿದೆ. ಡಿಸೆಂಬರ್ ವೇಳೆಗೆ ಭಾರತದಲ್ಲಿ ಕೊರೊನಾ ಅಂತ್ಯಗೊಳ್ಳಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ವರದಿಯಿಂದ ಸಾರ್ವಜನಿಕರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...