ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಮಾರಣಾಂತಿಕ ಕೊರೊನಾ ವೈರಸ್ ಅಬ್ಬರ ದಿನೇ ದಿನೇ ಹೆಚ್ಚಾಗುತ್ತಿದೆ. ಈ ಮಹಾಮಾರಿಯಿಂದಾಗಿ ಈಗಾಗಲೇ 2,473 ಮಂದಿ ಸಾವನ್ನಪ್ಪಿದ್ದು, 77,903 ಮಂದಿ ಸೋಂಕು ಪೀಡಿತರಾಗಿದ್ದಾರೆ.
ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ್ದು, ಹೀಗಾಗಿ ಬಹುತೇಕ ಕಂಪನಿಗಳು ತನ್ನ ನೌಕರರಿಗೆ ವರ್ಕ್ ಫ್ರಮ್ ಹೋಮ್ ಅವಕಾಶ ನೀಡಿದೆ. ಸುಪ್ರೀಂ ಕೋರ್ಟ್ ಸಹ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಕರಣಗಳ ವಿಚಾರಣೆ ನಡೆಸುತ್ತಿದೆ.
ಇದರ ಮಧ್ಯೆ ಸುಪ್ರೀಂ ಕೋರ್ಟ್ ನ ಮಹಾ ಕಾರ್ಯದರ್ಶಿ ಸಂಜೀವ್ ಎಸ್. ಕಲಗಾಂವ್ಕರ್ ಮಹತ್ವದ ಅಧಿಸೂಚನೆಯನ್ನು ಹೊರಡಿಸಿದ್ದು, ಕೋಟು ಹಾಗೂ ಗೌನ್ ಧರಿಸುವುದರಿಂದ ಕೊರೊನಾ ವೈರಸ್ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಮುಂದಿನ ಆದೇಶದವರೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕಲಾಪ ನಡೆಯುವ ವೇಳೆ ವಕೀಲರು ಇದನ್ನು ಧರಿಸಬಾರದು ಎಂದು ಸೂಚಿಸಿದ್ದಾರೆ.