alex Certify ಗರ್ಭಿಣಿ ಆನೆ ಸಾವು ಆಕಸ್ಮಿಕ ಘಟನೆ ಎಂದು ಹೇಳಿದ ಕೇಂದ್ರ ಪರಿಸರ ಸಚಿವಾಲಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗರ್ಭಿಣಿ ಆನೆ ಸಾವು ಆಕಸ್ಮಿಕ ಘಟನೆ ಎಂದು ಹೇಳಿದ ಕೇಂದ್ರ ಪರಿಸರ ಸಚಿವಾಲಯ

ಕೇರಳದ ಮಲಪ್ಪುರಂನಲ್ಲಿ ಗರ್ಭಿಣಿ ಆನೆಯೊಂದು ಸಿಡಿಮದ್ದು ತುಂಬಿಸಿಟ್ಟಿದ್ದ ಅನಾನಸ್ ಹಣ್ಣು ತಿಂದು ಸಾವನ್ನಪ್ಪಿದ ಘಟನೆ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಸೆಲೆಬ್ರಿಟಿಗಳಿಂದ ಹಿಡಿದು ಶ್ರೀಸಾಮಾನ್ಯನವರೆಗೆ ಎಲ್ಲರೂ ತೀವ್ರವಾಗಿ ಖಂಡಿಸಿದ್ದರು.

ಇದೀಗ ಈ ಕುರಿತು ಪ್ರಾಥಮಿಕ ತನಿಖಾ ವರದಿ ಹೊರಬಿದ್ದಿದ್ದು, ಆಕಸ್ಮಿಕವಾಗಿ ಸಿಡಿಮದ್ದು ತುಂಬಿಸಿಟ್ಟಿದ್ದ ಹಣ್ಣು ತಿಂದು ಆನೆ ಮೃತಪಟ್ಟಿರಬಹುದೆಂದು ಕೇಂದ್ರ ಪರಿಸರ ಸಚಿವಾಲಯ ತಿಳಿಸಿದೆ.

ಕಾಡುಪ್ರಾಣಿಗಳು ತೋಟಕ್ಕೆ ನುಗ್ಗಿ ಫಸಲು ಹಾಳು ಮಾಡಬಾರದೆಂಬ ಕಾರಣಕ್ಕೆ ಈ ಭಾಗದ ಸ್ಥಳೀಯರು ಹಣ್ಣಿನಲ್ಲಿ ಸಿಡಿಮದ್ದು ತುಂಬಿಡುವುದು ಸಾಮಾನ್ಯವಾಗಿದೆ ಎಂದು ತಿಳಿಸಲಾಗಿದ್ದು, ಇಂತಹ ಹಣ್ಣು ತಿಂದು 15 ವರ್ಷದ ಗರ್ಭಿಣಿ ಆನೆ ಮೃತಪಟ್ಟಿರಬಹುದೆಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...