alex Certify ಜೈಲು ಪಾಲಾಗಿರುವ ಪತ್ರಕರ್ತ ಅರ್ನಬ್ ಗೆ ಹಿನ್ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೈಲು ಪಾಲಾಗಿರುವ ಪತ್ರಕರ್ತ ಅರ್ನಬ್ ಗೆ ಹಿನ್ನಡೆ

2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಅವರ ಆತ್ಮಹತ್ಯೆಗೆ ಅರ್ನಬ್ ಗೋಸ್ವಾಮಿ ಪ್ರಚೋದನೆ ನೀಡಿದ್ದರು ಎಂಬ ಆರೋಪದಡಿ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಬಂಧನದ ವೇಳೆ ನನ್ನ ಮೇಲೆ ಹಲ್ಲೆಯಾಗಿದೆ ಎಂದು ಗೋಸ್ವಾಮಿ ಆರೋಪ ಮಾಡಿದ್ದರು.

ಹೌದು, ರಾಯ್ ಗಢ ಜಿಲ್ಲೆಯ ಅಲಿಬಾಗ್ ಪೊಲೀಸ್ ಠಾಣೆಗೆ ಪೊಲೀಸ್ ವಾಹನದಲ್ಲಿ ಕರೆತರುವ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅರ್ನಬ್ ಗೋಸ್ವಾಮಿ, ನನ್ನ ಮೇಲೆ ಪೊಲೀಸರು ದೈಹಿಕ ಹಲ್ಲೆ ನಡೆಸಿದ್ದಾರೆ, ನನ್ನನ್ನು ಕೀಳಾಗಿ ನಡೆಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಆದರೆ ಇದೀಗ ಹಲ್ಲೆಯಾಗಿರುವುದಕ್ಕೆ ಯಾವುದೇ ಸಾಕ್ಷಿ, ಪುರಾವೆ ಇಲ್ಲ ಅಂತ ಅಲಿಬಾಗ್ ಮ್ಯಾಜಿಸ್ಟ್ರೇಟ್ ಹೇಳಿದ್ದಾರೆ.

ಅರ್ನಬ್ ಮೇಲೆ ಹಲ್ಲೆ ನಡೆದಿದೆ ಅಥವಾ ಅವರಿಗೆ ಪೊಲೀಸರು ಬಲ ಪ್ರಯೋಗ ಮಾಡಿದ್ದಾರೆ ಎಂದು ಹೇಳುವುದಕ್ಕೆ ಯಾವುದೇ ಸಾಕ್ಷಿ ಇಲ್ಲ. ವೈದ್ಯಕೀಯ ವರದಿಯಲ್ಲೂ ಈ ಬಗ್ಗೆ ಯಾವುದೇ ಪೂರಕವಾದ ಪುರಾವೆ ಕಾಣುತ್ತಿಲ್ಲ ಎಂದು ಅಲಿಬಾಗ್ ಮ್ಯಾಜಿಸ್ಟ್ರೇಟ್ ಅಭಿಪ್ರಾಯಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...