ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ತಂದೆ ಆನಂದ್ ಸಿಂಗ್ ಇಹಲೋಕ ತ್ಯಜಿಸಿದ್ದಾರೆ. ಅವ್ರ ಪಾರ್ಥೀವ ಶರೀರವನ್ನು ಉತ್ತರಾಖಂಡಕ್ಕೆ ತೆಗೆದುಕೊಂಡು ಹೋಗಲಾಗಿದೆ. ಅಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ. ಆದ್ರೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಗೆ ತಂದೆ ಅಂತಿಮ ದರ್ಶನ ಪಡೆಯಲು ಸಾಧ್ಯವಾಗಲಿಲ್ಲ.
ಕೊರೊನಾ ನಿಯಂತ್ರಣದ ಸಭೆಯಲ್ಲಿದ್ದ ಸಿಎಂಗೆ ತಂದೆ ನಿಧನದ ಸುದ್ದಿ ಸಿಕ್ಕಿತ್ತು. ಸಭೆ ಮುಂದುವರೆಸಿದ್ದ ಸಿಎಂ ನಂತ್ರ ಪತ್ರ ಬರೆದಿದ್ದಾರೆ. ಅದ್ರಲ್ಲಿ ಸಿಎಂ, ತಂದೆ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದಿದ್ದಾರೆ. ಲಾಕ್ ಡೌನ್ ಮುಗಿದ ಮೇಲೆ ಕುಟುಂಬಸ್ಥರನ್ನು ಭೇಟಿಯಾಗುವುದಾಗಿ ಹೇಳಿದ್ದಾರೆ.
ಭಾವುಕರಾಗಿ ಪತ್ರ ಬರೆದ ಯೋಗಿ, ಲಾಕ್ ಡೌನ್ ಹಿನ್ನಲೆಯಲ್ಲಿ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗ್ತಿಲ್ಲ ಎಂದಿದ್ದಾರೆ. ಅಷ್ಟೆ ಅಲ್ಲ, ಅಂತಿಮ ಸಂಸ್ಕಾರದಲ್ಲಿ ಸಾಧ್ಯವಾದಷ್ಟು ಕಡಿಮೆ ಜನರು ಪಾಲ್ಗೊಳ್ಳಿ ಎಂದು ಜನರಿಗೆ ಮನವಿ ಮಾಡಿದ್ದಾರೆ.