alex Certify ತಾರಕಕ್ಕೇರಿದ ಕಂಗನಾ – ‘ಮಹಾ’ ಸರ್ಕಾರದ ನಡುವಿನ ಮಾತಿನ ಸಮರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಾರಕಕ್ಕೇರಿದ ಕಂಗನಾ – ‘ಮಹಾ’ ಸರ್ಕಾರದ ನಡುವಿನ ಮಾತಿನ ಸಮರ

ಖ್ಯಾತ ಬಾಲಿವುಡ್ ನಟಿ ಕಂಗನಾ ರಣಾವತ್ ಹಾಗೂ ಮಹಾರಾಷ್ಟ್ರ ಸರ್ಕಾರದ ನಡುವಿನ ಮುಸುಕಿನ ಗುದ್ದಾಟ ಮುಂದುವರೆದಿದ್ದು, ಮಾತಿನ ಸಮರ ತಾರಕಕ್ಕೇರಿದೆ. ಅನಧಿಕೃತವಾಗಿ ನಿರ್ಮಿಸಿದ್ದರೆಂಬ ಕಾರಣಕ್ಕೆ ತಮ್ಮ ಒಡೆತನದ ಕಟ್ಟಡವನ್ನು ಕೆಡವಲು ಮುಂದಾಗಿದ್ದ ಹಿನ್ನೆಲೆಯಲ್ಲಿ ಕಂಗನಾ ಸಿಡಿದು ನಿಂತಿದ್ದಾರೆ.

ತಮಗೆ ಜೀವ ಭಯವಿದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರದಿಂದ ಈಗಾಗಲೇ ವೈ ಕೆಟಗರಿ ಭದ್ರತೆ ಪಡೆದಿರುವ ಕಂಗನಾ ರಣಾವತ್, ಇದೀಗ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರನ್ನು ಭೇಟಿ ಮಾಡಿ ಇತ್ತೀಚಿನ ಬೆಳವಣಿಗೆಗಳನ್ನು ವಿವರಿಸಿದ್ದಾರೆ. ಈ ಸಂದರ್ಭದಲ್ಲಿ ಕಂಗನಾ ಜೊತೆ ಅವರ ಸಹೋದರಿ ರಂಗೋಲಿ ಸಹ ಇದ್ದರು.

ಇದರ ಮಧ್ಯೆ ಇದೇ ಮೊದಲ ಬಾರಿಗೆ ಪ್ರಸಕ್ತ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಬಹಿರಂಗವಾಗಿ ಮಾತನಾಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಮಹಾರಾಷ್ಟ್ರದ ಹೆಸರನ್ನು ಹಾಳು ಮಾಡುವ ಸಂಚು ನಡೆಯುತ್ತಿದೆ. ನಾನು ಮೌನವಾಗಿದ್ದೇನೆ ಎಂದ ಮಾತ್ರಕ್ಕೆ ಇದರ ಹಿಂದಿನ ರಾಜಕೀಯ ಗೊತ್ತಿಲ್ಲ ಎಂದರ್ಥವಲ್ಲ. ಅದೆಲ್ಲವನ್ನು ಸಮರ್ಥವಾಗಿ ಎದುರಿಸುತ್ತೇನೆ ಎಂದು ಗುಡುಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...