ಮಹಾಮಾರಿ ಕೊರೊನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಧಾರ್ಮಿಕ ಮಂದಿರಗಳನ್ನು ಬಂದ್ ಮಾಡಿಸಲಾಗಿದೆ. ಇದರಿಂದಾಗಿ ಕೊರೊನಾ ಸಂಕಷ್ಟದ ಸಮಯದಲ್ಲಿ ದೇವರ ಮೊರೆ ಹೋಗಲು ಭಕ್ತರಿಗೆ ಕಷ್ಟವಾಗಿದೆ.
ಅದರಲ್ಲೂ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಹೋಗುವವರು ಯಾವಾಗ ಲಾಕ್ ಡೌನ್ ಕೊನೆಗೊಳ್ಳಲಿದೆಯೋ ಎಂಬ ನಿರೀಕ್ಷೆಯಲ್ಲಿದ್ದಾರೆ. ಇದರ ಮಧ್ಯೆ ಭಕ್ತರ ಕೋರಿಕೆಯ ಮೇರೆಗೆ ದೇವಸ್ಥಾನದ ಆಡಳಿತ ಮಂಡಳಿ ರಿಯಾಯಿತಿ ದರದಲ್ಲಿ ಲಡ್ಡು ಮಾರಾಟ ಮಾಡಲು ಮುಂದಾಗಿದೆ.
ಬೆಂಗಳೂರು, ಹೈದರಾಬಾದ್, ಚೆನ್ನೈ ಮತ್ತು ಆಂಧ್ರಪ್ರದೇಶದ 13 ಜಿಲ್ಲಾ ಕೇಂದ್ರಗಳಲ್ಲಿ ನಾಳೆಯಿಂದ ಲಡ್ಡು ಮಾರಾಟ ಆರಂಭವಾಗಲಿದ್ದು, ಒಂದೊಮ್ಮೆ ಸಾವಿರಕ್ಕೂ ಅಧಿಕ ಲಡ್ಡು ಬೇಕಾದಲ್ಲಿ ಭಕ್ತರು ತಮ್ಮ ಹೆಸರು, ಮೊಬೈಲ್ ಸಂಖ್ಯೆ ಮೂಲಕ ಇ-ಮೇಲ್ ಸಂದೇಶ ಕಳಿಸಬೇಕಾಗಿದೆ.
ಹೆಚ್ಚಿನ ಮಾಹಿತಿಗಾಗಿ https://tirupatibalaji.ap.gov.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದ್ದು, ವಿವಿಧ ಸೇವಾ ಟಿಕೆಟ್ ಗಳನ್ನು ಮುಂಗಡವಾಗಿ ಪಡೆದುಕೊಳ್ಳಬಹುದಾಗಿದೆ.