alex Certify ದರ್ಶನ್ ಬರುತ್ತಿದ್ದಂತೆ ಥಿಯೇಟರ್‌ ನಲ್ಲಿ ಕುಂಬಳಕಾಯಿ ಒಡೆದು ಸಂಭ್ರಮಿಸಿದ ಅಭಿಮಾನಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದರ್ಶನ್ ಬರುತ್ತಿದ್ದಂತೆ ಥಿಯೇಟರ್‌ ನಲ್ಲಿ ಕುಂಬಳಕಾಯಿ ಒಡೆದು ಸಂಭ್ರಮಿಸಿದ ಅಭಿಮಾನಿಗಳು

 

ಶ್ರೀ ನರಸಿಂಹ ನಿರ್ದೇಶನದ ಪ್ರಜ್ವಲ್ ದೇವರಾಜ್ ನಟನೆಯ ‘ಇನ್ಸ್ ಪೆಕ್ಟರ್ ವಿಕ್ರಂ’ ಮೊನ್ನೆಯಷ್ಟೇ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು ಭರ್ಜರಿ ಪ್ರದರ್ಶನ ಕಾಣುತ್ತಿದೆ, ಸಿನಿ ಪ್ರೇಕ್ಷಕರಿಂದ ಈ ಸಿನಿಮಾ ಬಗ್ಗೆ ಉತ್ತಮ ಪ್ರತಿಕ್ರಿಯೆಗಳು ದೊರೆತಿವೆ.

ವಿನಯ್ ರಾಜ್ ಕುಮಾರ್ ಜೊತೆ ನಟಿಸಲಿದ್ದಾರೆ ಅದಿತಿ ಪ್ರಭುದೇವ

ಈ ಚಿತ್ರದಲ್ಲಿ ಸ್ಯಾಂಡಲ್ ವುಡ್ ನ ಬಾಕ್ಸಾಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆಸ್ಟ್ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದು. ಚನ್ನಪಟ್ಟಣದ ದರ್ಶನ್ ಫ್ಯಾನ್ಸ್ ಗಳು ದರ್ಶನ್ ಸ್ಕ್ರೀನ್ ಮೇಲೆ ಬರುತ್ತಿದ್ದಂತೆ ಡಿ ಬಾಸ್ ಎಂದು ಕೂಗುತ್ತಾ ಆರತಿ ಬೆಳಗಿ ಕುಂಬಳಕಾಯಿ ಒಡೆದು ಸಂಭ್ರಮಿಸಿದ್ದಾರೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಕರ್ನಾಟಕದಲ್ಲಿ ಅಪಾರ ಅಭಿಮಾನಿಗಳ ಬಳಗವನ್ನೇ ಹೊಂದಿದ್ದಾರೆ ಅವರ ಅಭಿಮಾನಿಗಳು ಒಂದಲ್ಲ ಒಂದು ರೀತಿಯಲ್ಲಿ ಅಭಿಮಾನವನ್ನು ತೋರಿಸುತ್ತಲೇ ಇರುತ್ತಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...