alex Certify ದೆಹಲಿಯಲ್ಲೇ ನಡೆಯಲಿದೆ ಸುರೇಶ್ ಅಂಗಡಿಯವರ ಅಂತ್ಯಕ್ರಿಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೆಹಲಿಯಲ್ಲೇ ನಡೆಯಲಿದೆ ಸುರೇಶ್ ಅಂಗಡಿಯವರ ಅಂತ್ಯಕ್ರಿಯೆ

ಕಳೆದ ರಾತ್ರಿ ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯಲ್ಲಿ ವಿಧಿವಶರಾದ ಕೇಂದ್ರ ಸಚಿವ ಸುರೇಶ್ ಅಂಗಡಿಯವರ ಅಂತ್ಯಕ್ರಿಯೆ ನವದೆಹಲಿಯಲ್ಲಿ ನಡೆಯಲಿದೆ ಎಂದು ಹೇಳಲಾಗಿದೆ.

ಸುರೇಶ್ ಅಂಗಡಿಯವರ ಕುಟುಂಬ ಸದಸ್ಯರು ಬೆಳಗಾವಿಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಿದ್ದರಾದರೂ ಕೊರೊನಾ ನಿಯಮಗಳ ಕಾರಣಕ್ಕೆ ಅದು ಸಾಧ್ಯವಾಗುತ್ತಿಲ್ಲವೆನ್ನಲಾಗಿದೆ.

ನಿಯಮಗಳ ಪ್ರಕಾರ ಯಾವ ವ್ಯಕ್ತಿ ಕೊರೊನಾದಿಂದ ಸಾವನ್ನಪ್ಪುತ್ತಾರೋ ಅವರ ಅಂತ್ಯಕ್ರಿಯೆ ಅದೇ ಊರಿನಲ್ಲಿ ನಡೆಯಬೇಕಾಗಿದ್ದು, ಹೀಗಾಗಿ ಸುರೇಶ್ ಅಂಗಡಿಯವರ ಪಾರ್ಥಿವ ಶರೀರವನ್ನು ಬೆಳಗಾವಿಗೆ ತರಲು ಆಗುವುದಿಲ್ಲ.

ಈ ಹಿನ್ನಲೆಯಲ್ಲಿ ನವದೆಹಲಿಯಲ್ಲೇ ಸುರೇಶ್ ಅಂಗಡಿಯವರ ಅಂತ್ಯಕ್ರಿಯೆ ನೆರವೇರಲಿದ್ದು, ಕುಟುಂಬ ಸದಸ್ಯರು ದೆಹಲಿಗೆ ತೆರಳಲಿದ್ದಾರೆಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...