ಲಾಕ್ಡೌನ್ನಿಂದಾಗಿ ಅನೇಕ ಮಂದಿಯ ಬದುಕು ಮೂರಾಬಟ್ಟೆಯಾಗಿದೆ. ಕೈಯಲ್ಲಿ ಕೆಲಸವಿಲ್ಲದೆ ಜನ ಪರದಾಡುವಂತಾಗಿದೆ. ಪಟ್ಟಣದಲ್ಲಿ ಕೆಲಸ ಅರಸಿ ಬಂದು ಇದೀಗ ಕೆಲಸವಿಲ್ಲದೆ ತಮ್ಮ ತಮ್ಮ ಹಳ್ಳಿಗಳಿಗೆ ಕಾರ್ಮಿಕರು ವಾಪಸ್ಸಾಗಿದ್ದಾರೆ. ಇನ್ನು ನಿರ್ಗತಿಕರು ಬಡವರ ಗೋಳಂತೂ ಹೇಳತೀರದಾಗಿದೆ. ಹೀಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದರೂ ಅದು ಸರಿಯಾಗಿ ತಲುಪುತ್ತಿಲ್ಲ ಎಂಬುದು ಕಾಂಗ್ರೆಸ್ ವಾದ.
ಬಡವರ ಖಾತೆಗೆ 10 ಸಾವಿರ ಹಣ ಹಾಕಿ ಅಂತಾ ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಒತ್ತಾಯ ಮಾಡುತ್ತಲೇ ಇದೆ. ಆದರೆ ಸರ್ಕಾರ ಇದಕ್ಕೆ ತಲೆಕೆಡಿಸಿಕೊಂಡಿಲ್ಲ. ಹೀಗಾಗಿ ಕಾಂಗ್ರೆಸ್ ಪಕ್ಷವೇ ಬಡವರ ನೆರವಿಗೆ ನಿಲ್ಲಲು ಮುಂದಾಗಿದೆ. ಈ ಮೂಲಕ ಹೊಸ ಅಭಿಯಾನವನ್ನು ಆರಂಭಿಸಲು ಕಾಂಗ್ರೆಸ್ ಮುಂದಾಗಿದೆ.
ಇಂದಿನಿಂದ ಬಡ ಕುಟುಂಬಗಳಿಗೆ ಸ್ವತಃ ಕಾಂಗ್ರೆಸ್ 10 ಸಾವಿರ ರೂಪಾಯಿ ನೀಡಲು ಮುಂದಾಗಿದೆ. ಬಡವರ ಕುಟುಂಬಕ್ಕೆ ನೆರವಾಗುವ ಮೂಲಕ ಸರ್ಕಾರದ ಗಮನ ಸೆಳೆಯಲು ಕಾಂಗ್ರೆಸ್ ಮುಂದಾಗಿದೆ. ಆದರೆ ಇಡೀ ದೇಶದಲ್ಲಿ ಇರುವ ಬಡವರಿಗೆ ಹಣ ಹೇಗೆ ತಲುಪುತ್ತದೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ.