ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸಂಜೆ 4 ಗಂಟೆಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಲಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಘೋಷಿಸಿರುವ 20 ಲಕ್ಷ ಕೋಟಿ ರೂಪಾಯಿಗಳ ಪ್ಯಾಕೇಜ್ ಕುರಿತು ವಿಸ್ತೃತ ಮಾಹಿತಿ ನೀಡಲಿದ್ದಾರೆ.
ಕೊರೊನಾ ವೈರಸ್ ಕಾರಣಕ್ಕೆ ಘೋಷಿಸಲಾಗಿರುವ ಲಾಕ್ ಡೌನ್ ನಿಂದಾಗಿ ದೇಶದ ಜನತೆ ಆರ್ಥಿಕ ಸಂಕಷ್ಟದಲ್ಲಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರದಂದು ಈ ಬೃಹತ್ ಮೊತ್ತದ ಪ್ಯಾಕೇಜ್ ಘೋಷಿಸಿದ್ದರು.
ಅಲ್ಲದೇ ಈ ಪ್ಯಾಕೇಜ್ ಹಂಚಿಕೆ ಕುರಿತ ವಿವರವನ್ನು ಹಣಕಾಸು ಸಚಿವರು ನೀಡಲಿದ್ದಾರೆ ಎಂದು ಮೋದಿಯವರು ಹೇಳಿದ್ದು, ಹೀಗಾಗಿ ನಿರ್ಮಲಾ ಸೀತಾರಾಮನ್ ಇಂದು ಪತ್ರಿಕಾಗೋಷ್ಠಿಯಲ್ಲಿ ಈ ಕುರಿತ ಮಾಹಿತಿ ಹಂಚಿಕೊಳ್ಳಲಿದ್ದಾರೆ.