alex Certify ಬಿಗ್ ನ್ಯೂಸ್: 3 ತಿಂಗಳಲ್ಲೇ ಬಿಜೆಪಿ ಕುರಿತು ಸಿಂಧಿಯಾಗೆ ಭ್ರಮನಿರಸನ…! ಮತ್ತೆ ಕಾಂಗ್ರೆಸ್ ನತ್ತ ಮುಖ ಮಾಡಿದ ಯುವ ನಾಯಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: 3 ತಿಂಗಳಲ್ಲೇ ಬಿಜೆಪಿ ಕುರಿತು ಸಿಂಧಿಯಾಗೆ ಭ್ರಮನಿರಸನ…! ಮತ್ತೆ ಕಾಂಗ್ರೆಸ್ ನತ್ತ ಮುಖ ಮಾಡಿದ ಯುವ ನಾಯಕ

ಮಧ್ಯ ಪ್ರದೇಶದ ಪ್ರಭಾವಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ತಮ್ಮ ಬೆಂಬಲಿಗ ಶಾಸಕರಿಂದ ರಾಜೀನಾಮೆ ಕೊಡಿಸುವ ಮೂಲಕ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷವನ್ನು ಉರುಳಿಸಿದ್ದರು. ಬಳಿಕ ಅಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಜ್ಯೋತಿರಾದಿತ್ಯ ಸಿಂಧಿಯಾ ಮೂರು ತಿಂಗಳ ಹಿಂದೆ ಕಾಂಗ್ರೆಸ್ ತೊರೆದು ತಮ್ಮ ಬೆಂಬಲಿಗರ ಜೊತೆ ಬಿಜೆಪಿ ಸೇರ್ಪಡೆಗೊಂಡಿದ್ದರು.

ಇದೀಗ ಬಿಜೆಪಿ ಸಂಸ್ಕೃತಿಗೆ ಹೊಂದಿಕೊಳ್ಳಲು ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಸಾಧ್ಯವಾಗುತ್ತಿಲ್ಲವೆನ್ನಲಾಗಿದ್ದು, ಜೊತೆಗೆ ಬಿಜೆಪಿ ನಾಯಕರು ಕೊಟ್ಟ ಮಾತಿನಂತೆ ನಡೆದುಕೊಳ್ಳದಿರುವುದರಿಂದ ಭ್ರಮನಿರಸನಗೊಂಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಮರಳಿ ಕಾಂಗ್ರೆಸ್ ಸೇರ್ಪಡೆಗೊಳ್ಳಲು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಸಿಂಧಿಯಾ ಅವರ ಆಪ್ತರಲ್ಲಿ ಒಬ್ಬರಾದ ಸತ್ಯೇಂದ್ರ ಯಾದವ್ ಈ ಸ್ಫೋಟಕ ಮಾಹಿತಿಯನ್ನು ಬಹಿರಂಗಪಡಿಸಿದ್ದು, ಜ್ಯೋತಿರಾದಿತ್ಯ ಸಿಂಧಿಯಾ ಅವರ ಜೊತೆಯಲ್ಲೇ ಬಿಜೆಪಿ ಸೇರ್ಪಡೆಗೊಂಡಿದ್ದ ಸತ್ಯೇಂದ್ರ ಯಾದವ್ ಈಗಾಗಲೇ ಮರಳಿ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದಾರೆ. ಹೀಗಾಗಿ ಸಿಂಧಿಯಾ ಕೂಡ ಕಾಂಗ್ರೆಸ್ ಗೆ ಮರಳಲಿದ್ದಾರಾ ಎಂಬ ಪ್ರಶ್ನೆ ಮೂಡಿದೆ. ಶಾಸಕರ ರಾಜೀನಾಮೆಯಿಂದ ತೆರವಾಗಿರುವ 24 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಾಗಿದ್ದು, ಈ ಸಂದರ್ಭದಲ್ಲಿನ ಬೆಳವಣಿಗೆಗಳು ಬಿಜೆಪಿಗೆ ತಲೆಬಿಸಿ ಉಂಟು ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...