alex Certify BIG NEWS: ಬೀದಿ ವ್ಯಾಪಾರಿ, ವಲಸೆ ಕಾರ್ಮಿಕರು, ಸಣ್ಣ ರೈತರ ಯೋಜನೆ ಜೊತೆ ಬಂದ ನಿರ್ಮಲಾ ಸೀತಾರಾಮನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೀದಿ ವ್ಯಾಪಾರಿ, ವಲಸೆ ಕಾರ್ಮಿಕರು, ಸಣ್ಣ ರೈತರ ಯೋಜನೆ ಜೊತೆ ಬಂದ ನಿರ್ಮಲಾ ಸೀತಾರಾಮನ್

ಸ್ವಾವಲಂಭಿ ಭಾರತದ ಎರಡನೇ ಹಂತದ ಯೋಜನೆಯನ್ನು ನಿರ್ಮಲಾ ಸೀತಾರಾಮನ್  ಘೋಷಣೆ ಮಾಡುತ್ತಿದ್ದಾರೆ.

6 ಯೋಜನೆಯನ್ನು ಘೋಷಣೆ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ವಲಸೆ ಕಾರ್ಮಿಕರ 3 ಯೋಜನೆ, ಬೀದಿ ಬದಿ ವ್ಯಾಪಾರಿಗಳ ಒಂದು ಯೋಜನೆ, ಸಣ್ಣ ರೈತರ 2 ಯೋಜನೆ ಘೋಷಣೆ ಮಾಡ್ತಿದ್ದಾರೆ.

ವಲಸೆ ಕಾರ್ಮಿಕರನ್ನು ಸರ್ಕಾರ ಮರೆತಿಲ್ಲ. ಅವರ ಖಾತೆಗೆ ನೇರವಾಗಿ ಹಣ ವರ್ಗಾವಣೆಯಾಗಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 3 ಕೋಟಿ ರೈತರಿಗೆ ಈ ಮೊದಲೇ ಸಾಲ ನೀಡಲಾಗಿದೆ. ಕಡಿಮೆ ಬಡ್ಡಿ ದರದಲ್ಲಿ 4 ಲಕ್ಷ ಕೋಟಿ ಸಾಲವನ್ನು ರೈತರು ಪಡೆದಿದ್ದಾರೆ. ಸಾಲದ ಇಎಂಐ ಕಟ್ಟಲು 3 ತಿಂಗಳ ವಿನಾಯ್ತಿ ನೀಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 25 ಲಕ್ಷ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಲಾಕ್ ಡೌನ್ ಮಧ್ಯೆಯೂ ಎರಡು ತಿಂಗಳಲ್ಲಿ 25 ಸಾವಿರ ಕೋಟಿ ಸಾಲ ನೀಡಲಾಗಿದೆ ಎಂದು ನಿರ್ಮಲಾ ಹೇಳಿದ್ದಾರೆ. ಇಷ್ಟೇ ಯೋಜನೆಯಲ್ಲ, ಮುಂದಿನ ದಿನಗಳಲ್ಲಿ ಇನ್ನಷ್ಟು ಯೋಜನೆ ಘೋಷಣೆ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...