alex Certify ಭರ್ಜರಿ ಬೇಟೆ: ಮುತ್ತೂಟ್ ಫೈನಾನ್ಸ್ ದರೋಡೆ ಪ್ರಕರಣ – 18 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ ಪೊಲೀಸರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭರ್ಜರಿ ಬೇಟೆ: ಮುತ್ತೂಟ್ ಫೈನಾನ್ಸ್ ದರೋಡೆ ಪ್ರಕರಣ – 18 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ ಪೊಲೀಸರು

ಹೊಸೂರು: ಮುತ್ತೂಟ್ ಫೈನಾನ್ಸ್ ನಲ್ಲಿ ನಡೆದ ದರೋಡೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಕೇವಲ 18 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತಮಿಳುನಾಡಿನ ಹೊಸೂರು ಬಳಿಯ ಬಾಗಲೂರಿನ ಮುತ್ತೂಟ್ ಫೈನಾನ್ಸ್ ಕಚೇರಿಯಲ್ಲಿ ನಿನ್ನೆ ಹಾಡಹಗಲೇ ಸಿನಿಮೀಯ ರೀತಿಯಲ್ಲಿ ನುಗ್ಗಿದ ಬಂದೂಕುಧಾರಿಗಳು 25ಕೆಜಿ ಚಿನ್ನಾಭರಣ, ಹಣ ದೋಚಿ ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ತಮಿಳುನಾಡು ಪೊಲೀಸರು ಕಾರ್ಯಾಚರಣೆ ನಡೆಸಿ ಉತ್ತರ ಭಾರತ ಮೂಲದ ಆರೋಪಿಗಳನ್ನು ಬಂಧಿಸಿದ್ದಾರೆ.

ಹೈದರಾಬಾದ್ ಬಳಿ ಸಂಸತ್ ಪುರ ಹೆದ್ದಾರಿ ಬಳಿ ದರೋಡೆಕೋರರನ್ನು ಬಂಧಿಸಿರುವ ಪೊಲೀಸರು, ಲಾರಿ, 7 ನಾಡ ಪಿಸ್ತೂಲ್, ಎರಡು ಮಚ್ಚು ಹಾಗೂ 25 ಕೆಜಿ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...