ಮಕ್ಕಳ ಕಳ್ಳರೆಂದು ಭಾವಿಸಿ ಇಬ್ಬರು ಸಾಧುಗಳು ಸೇರಿದಂತೆ ಮೂವರನ್ನು ಸಾರ್ವಜನಿಕರು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಪಾಲ್ಘಾರ್ ನಲ್ಲಿ ನಡೆದಿದೆ.
ಇಬ್ಬರು ಸಾಧುಗಳು ಪರಿಚಯಸ್ಥರ ಅಂತ್ಯ ಸಂಸ್ಕಾರಕ್ಕೆಂದು ಕಾರಿನಲ್ಲಿ ತೆರಳುತ್ತಿದ್ದು, ಈ ವೇಳೆ ನೂರಾರು ಗ್ರಾಮಸ್ಥರು ಅವರನ್ನು ಅಡ್ಡಗಟ್ಟಿದ್ದಾರೆ.
ಮಕ್ಕಳನ್ನು ಅಪಹರಿಸಿ ಅಂಗಾಂಗಗಳನ್ನು ಕಿತ್ತು ಮಾರಾಟ ಮಾಡುವವರು ಎಂದು ಶಂಕಿಸಿದ ಗ್ರಾಮಸ್ಥರ ಗುಂಪು ಬಡಿಗೆಗಳಿಂದ ಸಾಧುಗಳು ಹಾಗೂ ಕಾರು ಚಾಲಕನನ್ನು ಅಮಾನುಷವಾಗಿ ಥಳಿಸಿದೆ. ಇದರ ಪರಿಣಾಮವಾಗಿ ಮೂವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.