alex Certify ಮಕ್ಕಳ ಮುಂದೆ ಪತ್ರಕರ್ತನಿಗೆ ಗುಂಡು: ಸಿಸಿ ಟಿವಿಯಲ್ಲಿ ದೃಶ್ಯ ಸೆರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳ ಮುಂದೆ ಪತ್ರಕರ್ತನಿಗೆ ಗುಂಡು: ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

ದೆಹಲಿ ಬಳಿಯ ಗಾಜಿಯಾಬಾದ್‌ನಲ್ಲಿ ಪತ್ರಕರ್ತನೊಬ್ಬನಿಗೆ ಗುಂಡು ಹಾರಿಸಲಾಗಿದೆ. ದಾಳಿ ಚಿತ್ರಣ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಪತ್ರಕರ್ತ ವಿಕ್ರಮ್ ಜೋಶಿ ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ಮೋಟಾರ್ ಸೈಕಲ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಗುಂಪೊಂದು ಅವರ ಮೇಲೆ ಹಲ್ಲೆ ನಡೆಸಿ ಗುಂಡು ಹಾರಿಸಿದೆ.

ಪತ್ರಕರ್ತನ ತಲೆಗೆ ಗುಂಡು ತಗುಲಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಪತ್ರಕರ್ತ ವಿಕ್ರಮ್ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಗುಂಡು ಹಾರಿಸಿದ ಮುಖ್ಯ ಆರೋಪಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಗಾಜಿಯಾಬಾದ್‌ನ ವಿಜಯ್ ನಗರ ಪ್ರದೇಶದಲ್ಲಿ ರಸ್ತೆ ಬಳಿಯಿದ್ದ ಸಿಸಿ ಟಿವಿಯಲ್ಲಿ ಈ ದೃಶ್ಯಗಳು ಸೆರೆಯಾಗಿವೆ. ಬೈಕ್ ಬಿದ್ದ ತಕ್ಷಣ ಮಕ್ಕಳು ಅಲ್ಲಿಂದ ಓಡಿ ಹೋಗಿದ್ದಾರೆ. ಗುಂಡು ಹಾರಿಸಿರುದು ಸಿಸಿಟಿವಿಯಲ್ಲಿ ಸ್ಪಷ್ಟವಾಗಿಲ್ಲ. ಆದ್ರೆ ವ್ಯಕ್ತಿಯೊಬ್ಬ ಕಾರಿನ ಬಳಿ ಕರೆದೊಯ್ತಿರುವುದು ಸ್ಪಷ್ಟವಾಗಿ ಕಾಣ್ತಿದೆ. ಕೆಲ ದಿನಗಳ ಹಿಂದೆ ವಿಕ್ರಂ ಸೋದರ ಸೊಸೆ, ಈ ಗುಂಪಿನ ವಿರುದ್ಧ ದೂರು ನೀಡಿದ್ದಳು ಎಂದು ಪೊಲೀಸರು ಹೇಳ್ತಿದ್ದು, ತನಿಖೆ ನಂತ್ರ ವಿಚಾರ ಹೊರಬರಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...