alex Certify ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ನಕಲಿ ಸ್ವಾಮೀಜಿ ಅರೆಸ್ಟ್..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ನಕಲಿ ಸ್ವಾಮೀಜಿ ಅರೆಸ್ಟ್..!

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅವರನ್ನು ಜೀತದಾಳುಗಳಾಗಿ ಕೆಲಸ ಮಾಡಲು ಬೇರೆಯವರಿಗೆ ಸಹಾಯ ಮಾಡಿದ್ದ ಎಂಬ ಆರೋಪದಡಿ ಮುಜಾಫರ್ ಸುಕೇರ್ತಲ್‌ನ ಆಶ್ರಮವೊಂದರ ಮಾಲೀಕ ಸ್ವಾಮಿಭಕ್ತಿ ಭೂಷಣ ಗೋವಿಂದ ಮಹಾರಾಜ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಈ ವ್ಯಕ್ತಿ, ಸ್ವಾಮಿ ವೇಷ ಹಾಕಿ ಕುಕೃತ್ಯಗಳನ್ನು ಮಾಡುತ್ತಿದ್ದ ಎಂದು ಹೇಳಲಾಗಿದೆ. ಈತನನ್ನು ಮ್ಯಾಜಿಸ್ಟ್ರೇಟ್ ಅಮಿತ್‌ಕುಮಾರ್ ಮುಂದೆ ಹಾಜರುಪಡಿಸಿದ್ದಾರೆ. ಇನ್ನು ಈ ಸ್ವಾಮಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ನಾಲ್ಕು ಮಕ್ಕಳ ಮೇಲೆ ದೌರ್ಜನ್ಯ ನಡೆದಿರುವುದು ಖಚಿತವಾಗಿದೆ.

ಇನ್ನು ಈ ವ್ಯಕ್ತಿ ತ್ರಿಪುರ, ಮಿಜೋರಾಂ, ಅಸ್ಸಾಂನಿಂದ 7 ರಿಂದ 10 ವರ್ಷ ವಯಸ್ಸಿನ ಮಕ್ಕಳನ್ನು ಕರೆತಂದು ಆಶ್ರಮದಲ್ಲಿ ಇರಿಸಿಕೊಂಡಿದ್ದನಂತೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ಮಾಡಿದ್ದು, ಎಂಟು ಮಕ್ಕಳನ್ನು ರಕ್ಷಿಸಿದ್ದಾರೆ. ಈತನ ವಿರುದ್ದ ಐಪಿಸಿ ಸೆಕ್ಷನ್ 323, 377, 504 ಮತ್ತು ಪೋಸ್ಕೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...