ಏನಾದರೊಂದು ಕ್ಯಾತೆ ತೆಗೆಯುವ ಪಾಕಿಸ್ತಾನ ಆಗಾಗ ಭಾರತದ ಬಳಿ ಛೀಮಾರಿ ಹಾಕಿಸಿಕೊಳ್ಳುತ್ತಲೇ ಇರುತ್ತದೆ. ಆದರೂ ಬುದ್ದಿ ಮಾತ್ರ ಕಲಿಯುತ್ತಿಲ್ಲ. ಇದೀಗ ಮತ್ತೊಮ್ಮೆ ಆಕ್ರಮಿತ ಕಾಶ್ಮೀರ ಬಿಟ್ಟು ತೊಲಗುವಂತೆ ಭಾರತದ ಬಳಿ ಹೇಳಿಸಿಕೊಂಡಿದೆ.
ಪಾಕಿಸ್ತಾನ ಸರ್ವೋಚ್ಛ ನ್ಯಾಯಾಲಯ ನೀಡಿದ ಆದೇಶಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಹೌದು, ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರಾಂತ್ಯದಲ್ಲಿ ಸಾರ್ವತ್ರಿಕ ಚುನಾವಣಾ ನಡೆಸುವ ಕುರಿತು ಅಲ್ಲಿನ ಸುಪ್ರೀಂ ಕೋರ್ಟ್ ಪಾಕಿಸ್ತಾನಕ್ಕೆ ಸೂಚಿಸಿದೆ.
ಇದಕ್ಕೆ ಭಾರತ ವಿರೋಧ ವ್ಯಕ್ತಪಡಿಸಿದೆ. ಜೊತೆಗೆ ಗಿಲ್ಗಿಟ್-ಬಾಲ್ಟಿಸ್ತಾನ್ ಹಾಗೂ ಸಂಪೂರ್ಣ ಜಮ್ಮು – ಕಾಶ್ಮೀರ ಹಾಗೂ ಲದ್ದಾಕ್ ಭಾರತದ ಅವಿಭಾಜ್ಯ ಅಂಗವಾಗಿದ್ದು, ಈ ಆಕ್ರಮಿತ ಪ್ರದೇಶವನ್ನು ಖಾಲಿ ಮಾಡುವಂತೆ ಪಾಕಿಸ್ತಾನಕ್ಕೆ ಭಾರತ ಖಡಕ್ ಎಚ್ಚರಿಕೆ ನೀಡಿದೆ.
ಈ ಪ್ರದೇಶಗಳನ್ನು ಅಕ್ರಮವಾಗಿ ಪಾಕಿಸ್ತಾನ ಕಬಳಿಕೆ ಮಾಡಿದೆ. ಇದೀಗ ಮತ್ತೆ ಕ್ಯಾತೆ ತೆಗೆಯುತ್ತಿರುವುದು ಸರಿಯಲ್ಲ. ಇದರ ಬಗ್ಗೆ ಯಾವುದೇ ಹಕ್ಕನ್ನು ಪಾಕಿಸ್ತಾನ ಹೊಂದಿಲ್ಲ. ಕೂಡಲೇ ಈ ಜಾಗಗಳನ್ನು ಬಿಟ್ಟು ಹೋಗಿ ಎಂದು ಭಾರತದ ವಿದೇಶಾಂಗ ಸಚಿವಾಲಯ ಸೂಚಿಸಿದೆ ಎನ್ನಲಾಗಿದೆ.