alex Certify ಮತ್ತೊಬ್ಬ ಸಚಿವರಿಗೆ ‘ಕೊರೊನಾ’ ಸೋಂಕು…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೊಬ್ಬ ಸಚಿವರಿಗೆ ‘ಕೊರೊನಾ’ ಸೋಂಕು…!

ದೆಹಲಿ ಸರ್ಕಾರದ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಕೊರೊನಾ ಸೋಂಕು ಪೀಡಿತರಾಗಿದ್ದು ಅವರ ಆರೋಗ್ಯ ಪರಿಸ್ಥಿತಿ ತೀರಾ ಹದಗೆಟ್ಟಿದೆ ಎನ್ನಲಾಗಿದೆ. ಹೀಗಾಗಿ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದ್ದು, ಪ್ಲಾಸ್ಮಾ ಚಿಕಿತ್ಸೆ ನೀಡಲು ನಿರ್ಧರಿಸಲಾಗಿದೆ.

ಇದರ ಮಧ್ಯೆ ಮತ್ತೊಬ್ಬ ಸಚಿವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ತಮಿಳುನಾಡಿನ ಉನ್ನತ ಶಿಕ್ಷಣ ಸಚಿವ ಕೆ.ಪಿ. ಅನ್ಬಳಗನ್ ಸೋಂಕು ಪೀಡಿತರಾಗಿದ್ದು, ಚಿಕಿತ್ಸೆಗಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಚಿವ ಅನ್ಬಳಗನ್ ಬುಧವಾರದಂದು ಸಭೆಯೊಂದರಲ್ಲಿ ಭಾಗವಹಿಸಿದ್ದು, ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದರೆನ್ನಲಾಗಿದೆ. ಹೀಗಾಗಿ ಅವರೊಂದಿಗೆ ಸಂಪರ್ಕಕ್ಕೆ ಬಂದವರಿಗೆ ಈಗ ಆತಂಕ ಶುರುವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...