alex Certify ಮೋದಿ ಸರ್ಕಾರದ ವಿರುದ್ಧ ಸುಬ್ರಮಣಿಯನ್ ಸ್ವಾಮಿ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೋದಿ ಸರ್ಕಾರದ ವಿರುದ್ಧ ಸುಬ್ರಮಣಿಯನ್ ಸ್ವಾಮಿ ಆಕ್ರೋಶ

ಲಾಕ್‌ ಡೌನ್‌ನಿಂದಾಗಿ ವಲಸೆ ಕಾರ್ಮಿಕರೆಲ್ಲಾ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಬೇರೆ ರಾಜ್ಯಗಳಿಗೆ ಹಾಗೂ ಜಿಲ್ಲೆಗಳಿಗೆ ಹೋಗಲು ಸರ್ಕಾರ ಅನುವು ಮಾಡಿಕೊಟ್ಟಿದೆ. ಹೀಗಾಗಿ ಬಸ್, ರೈಲಿನಲ್ಲಿ ತಮ್ಮ ಊರುಗಳಿಗೆ ಕಾರ್ಮಿಕರು ಪ್ರಯಾಣ ಬೆಳೆಸಿದ್ದಾರೆ.

ಆದರೆ ಕಾರ್ಮಿಕರಿಗೆ ಪ್ರಯಾಣ ದರವನ್ನು ನಿಗದಿ ಮಾಡಲಾಗಿದ್ದು, ಟಿಕೆಟ್ ಪಡೆದು ತಮ್ಮ ಊರುಗಳಿಗೆ ಹೋಗಬೇಕಾದ ಪರಿಸ್ಥಿತಿ ಬಂದಿದೆ. ಭಾನುವಾರದಿಂದ ಕರ್ನಾಟಕದಲ್ಲಿ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಆದರೆ ಟ್ರೈನ್‌ಗಳಲ್ಲಿ ಬೇರೆ ರಾಜ್ಯಗಳಿಗೆ ತೆರಳಲು ಟಿಕೆಟ್ ಪಡೆಯಬೇಕಾಗಿದೆ. ಈ ವಿಚಾರವಾಗಿ ಕೇಂದ್ರದ ವಿರುದ್ಧ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರ್ಮಿಕರ ಬಳಿ ಹಣ ಪಡೆಯಬೇಡಿ. ಅವರ ಊರುಗಳಿಗೆ ಉಚಿತವಾಗಿ ಅವರನ್ನು ತಲುಪಿಸಿ ಎಂದು ಹೇಳಿರುವ ಸುಬ್ರಮಣಿಯನ್ ಸ್ವಾಮಿ, ಇಂತಹ ಸಮಯದಲ್ಲಿ ಅವರ ಬಳಿ ಹಣ ಪಡೆಯುವುದು ಎಷ್ಟು ಸರಿ. ಅವರನ್ನು ಸುರಕ್ಷಿತವಾಗಿ ತಲುಪಿಸಬೇಕಾದದ್ದು ಸರ್ಕಾರದ ಕೆಲಸ ಅಂತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ರೈಲ್ವೇ ಇಲಾಖೆ ಹಣ ನೀಡದೇ ಇದ್ದರೆ ಪಿಎಂ CARES ಫಂಡ್ ನಿಂದ ಹಣ ಕೊಡಿ ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...