alex Certify ರಾಮಮಂದಿರ ಭೂಮಿ ಪೂಜೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಗುಪ್ತಚರ ಇಲಾಖೆ ನೀಡಿದೆ ಈ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಮಮಂದಿರ ಭೂಮಿ ಪೂಜೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಗುಪ್ತಚರ ಇಲಾಖೆ ನೀಡಿದೆ ಈ ಎಚ್ಚರಿಕೆ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ. ಆಗಸ್ಟ್ 5ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಆದ್ರೆ ಈ ಕಾರ್ಯಕ್ರಮಕ್ಕೆ ಅಡ್ಡಿಯುಂಟು ಮಾಡಲು ಭಯೋತ್ಪಾದಕರ ತಂಡ ಸಜ್ಜಾಗಿದೆ ಎಂದು ಕೇಂದ್ರ ಗುಪ್ತಚರ ಸಂಸ್ಥೆ ಎಚ್ಚರಿಕೆ ನೀಡಿದೆ.

ಆಗಸ್ಟ್ 5 ರಂದು ಪಾಕಿಸ್ತಾನದ ಐಎಸ್ಐ ಬೆಂಬಲಿತ ಭಯೋತ್ಪಾದಕ ಸಂಘಟನೆ ದಾಳಿ ನಡೆಸುವ ಸಾಧ್ಯತೆಯಿದೆ ಎಂದು ರಾಜ್ಯ ಸರ್ಕಾರಕ್ಕೆ ಗುಪ್ತಚರ ಸಂಸ್ಥೆ ಎಚ್ಚರಿಕೆ ನೀಡಿದೆ.

ಐಎಸ್ಐ, ಲಷ್ಕರ್-ಎ-ತೋಯ್ಬಾ ಮತ್ತು ಜೈಶ್-ಐ-ಮೊಹಮ್ಮದ್ ತಂಡದ ನಾಯಕರಿಗೆ ದಾಳಿ ನಡೆಸುವಂತೆ ಆದೇಶ ನೀಡಲಾಗಿದೆ ಎನ್ನಲಾಗಿದೆ. ಸಣ್ಣ ಭಯೋತ್ಪಾದಕರ ಗುಂಪು ದೇಶದೊಳಗೆ ನುಸುಳಬಹುದೆಂದು ಎಚ್ಚರಿಸಲಾಗಿದೆ. ಜನದಟ್ಟಣೆಯ ಸ್ಥಳದಲ್ಲಿ ದಾಳಿ ನಡೆಯಬಹುದೆಂದು ಹೇಳಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...