ಕೊರೊನಾದ ಈ ಬಿಕ್ಕಟ್ಟಿನಲ್ಲಿ ವಲಸೆ ಕಾರ್ಮಿಕರಿಗೆ ಉಚಿತ ಆಹಾರ ಧಾನ್ಯಗಳನ್ನು ನೀಡುವುದಾಗಿ ಭಾರತ ಸರ್ಕಾರ ಘೋಷಿಸಿದೆ.
ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆ ಅಡಿಯಲ್ಲಿ ವಲಸೆ ಕಾರ್ಮಿಕರಿಗೆ ಎರಡು ತಿಂಗಳವರೆಗೆ ಉಚಿತ ಆಹಾರ ಧಾನ್ಯಗಳನ್ನು ನೀಡಲಾಗುವುದು. ಪಡಿತರ ಚೀಟಿ ಲಭ್ಯವಿಲ್ಲದ ಕಾರ್ಮಿಕರಿಗೂ 5 ಕೆಜಿ ಪಡಿತರ ಮತ್ತು 1 ಕೆಜಿ ಧಾನ್ಯ ಸಿಗಲಿದೆ. ಇದರಿಂದ 8 ಕೋಟಿ ವಲಸೆ ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ಸರ್ಕಾರ ನಂಬಿದೆ.
ಪಡಿತರ ಚೀಟಿ ಇಲ್ಲದವರಿಗೆ ರೇಷನ್ ಹೇಗೆ ಸಿಗುತ್ತದೆ ಎಂಬ ಪ್ರಶ್ನೆ ಕಾಡುವುದು ಸಾಮಾನ್ಯ. ಪಡಿತರ ಚೀಟಿ ಇಲ್ಲದಿದ್ದರೆ ನಿಮ್ಮ ಆಧಾರ್ ಕಾರ್ಡ್ ತೆಗೆದುಕೊಂಡು ಹೆಸರು ನೋಂದಾಯಿಸಿಕೊಳ್ಳಬೇಕಾಗುತ್ತದೆ. ಕೇಂದ್ರ ಆಹಾರ ಮತ್ತು ಸರಬರಾಜು ಸಚಿವಾಲಯ ಈ ಬಗ್ಗೆ ಮಾಹಿತಿ ನೀಡಿದೆ.
ಇದರ ನಂತರ ಸ್ಲಿಪ್ ನೀಡಲಾಗುತ್ತದೆ. ಇದು ತೋರಿಸಿ ಉಚಿತ ಧಾನ್ಯವನ್ನು ಪಡೆಯಬೇಕು. ಇದಕ್ಕಾಗಿ ರಾಜ್ಯ ಸರ್ಕಾರವು ಆನ್ಲೈನ್ ಪ್ಲಾಟ್ಫಾರ್ಮ್ ಸಹ ಪ್ರಾರಂಭಿಸುವ ಸಾಧ್ಯತೆಯಿದೆ. ದೆಹಲಿ ಸರ್ಕಾರ ಈಗಾಗಲೇ ಆನ್ಲೈನ್ ನಲ್ಲಿ ಈ ಪ್ರಕ್ರಿಯೆ ಶುರು ಮಾಡಿದೆ.