ಕೊರೊನಾ ಸೋಂಕಿನ ಹಿನ್ನಲೆಯಲ್ಲಿ ದೇಶದಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಮೇ 3 ರವರೆಗೆ ಲಾಕ್ ಡೌನ್ ಘೋಷಣೆ ಮಾಡಿದ್ದಾರೆ ಮೋದಿ. ಮೇ 3 ನಂತ್ರ ಮುಂದೇನು ಎಂಬ ಪ್ರಶ್ನೆ ಈಗ ಎದ್ದಿದೆ. ಇಂದು ಪ್ರಧಾನಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದೆ. ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ.
ಈಗಾಗಲೇ ಮೋದಿಗೆ ಕೊರೊನಾ ನ್ಯಾಷನಲ್ ಟಾಸ್ಕ್ ಫೋರ್ಸ್ ವರದಿ ಸಲ್ಲಿಕೆ ಮಾಡಿದೆ. ಮೇ 3ರ ನಂತ್ರವೂ ಲಾಕ್ ಡೌನ್ ಮುಂದುವರೆಸಿ ಎಂದು ಸಲಹೆ ನೀಡಿದೆ. ಹಾಟ್ ಸ್ಪಾಟ್ ಗಳಲ್ಲಿ ಲಾಕ್ ಡೌನ್ ಅನಿವಾರ್ಯವೆಂದು ರಾಜನಾಥ್ ಸಿಂಗ್, ಮೋದಿಗೆ ನೀಡಿದ ವರದಿಯಲ್ಲಿ ಹೇಳಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಲಾಕ್ ಡೌನ್ ಮುಂದುವರಿಕೆ ಅನಿವಾರ್ಯವೆಂದು ವರದಿಯಲ್ಲಿ ಹೇಳಲಾಗಿದೆ. ಮೇ 15ರವರೆಗೆ ಲಾಕ್ ಡೌನ್ ಮುಂದುವರೆಸಿ ಎಂದು ವರದಿಯಲ್ಲಿ ಹೇಳಲಾಗಿದೆ.
ಹಸಿರು ವಲಯದಲ್ಲೂ ಲಾಕ್ ಡೌನ್ ಸಡಿಲಿಕೆ ಬೇಡ ಎಂದು ವರದಿಯಲ್ಲಿ ಹೇಳಲಾಗಿದೆ. ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದ್ದು, ಮಹತ್ವದ ನಿರ್ಧಾರ ಹೊರಗೆ ಬರುವ ಸಾಧ್ಯತೆಯಿದೆ.