alex Certify ವಲಸೆ ಕಾರ್ಮಿಕರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ಊರಿಗೆ ತೆರಳಲು ವಿಶೇಷ ರೈಲಿನ ವ್ಯವಸ್ಥೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಲಸೆ ಕಾರ್ಮಿಕರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ಊರಿಗೆ ತೆರಳಲು ವಿಶೇಷ ರೈಲಿನ ವ್ಯವಸ್ಥೆ

ಕರೋನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಲಾಕ್ ಡೌನ್ ನಿಂದಾಗಿ ದೇಶದ ವಿವಿಧೆಡೆ 15 ಲಕ್ಷಕ್ಕೂ ಅಧಿಕ ವಲಸೆ ಕಾರ್ಮಿಕರು ಸಿಲುಕಿಕೊಂಡಿದ್ದಾರೆ. ಇವರುಗಳು ತಮ್ಮ ಸ್ವಂತ ಊರಿಗೆ ತೆರಳಲು ಇದೀಗ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ಇದಕ್ಕಾಗಿ ರಾಜ್ಯ ಸರ್ಕಾರಗಳು ಬಸ್ ವ್ಯವಸ್ಥೆ ಮಾಡಬೇಕೆಂದು ಹಾಗೂ ಪ್ರಯಾಣದ ವೇಳೆ ವಲಸೆ ಕಾರ್ಮಿಕರಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ಪೂರೈಕೆ ಮಾಡಬೇಕಲ್ಲದೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಅನುಕೂಲ ಕಲ್ಪಿಸುವಂತೆ ಸೂಚಿಸಲಾಗಿತ್ತು.

ಅದರಂತೆ ರಾಜ್ಯ ಸರ್ಕಾರಗಳು ಬಸ್ ವ್ಯವಸ್ಥೆ ಮಾಡಿ ರಾಜ್ಯದೊಳಗಿನ ವಲಸೆ ಕಾರ್ಮಿಕರು ತಮ್ಮ ಸ್ವಂತ ಊರಿಗೆ ತೆರಳಲು ಅವಕಾಶ ಕಲ್ಪಿಸಿಕೊಟ್ಟಿದೆ. ಆದರೆ ಹೊರ ರಾಜ್ಯಗಳಲ್ಲಿರುವ ವಲಸೆ ಕಾರ್ಮಿಕರ ಪ್ರಯಾಣಕ್ಕೆ ಸಮಸ್ಯೆ ಎದುರಾಗಿದ್ದು, ಹೀಗಾಗಿ ಕೇಂದ್ರ ಸರ್ಕಾರ ಈ ಕಾರ್ಮಿಕರಿಗೆ ಸಿಹಿಸುದ್ದಿ ನೀಡಲು ಮುಂದಾಗಿದೆ.

ವಲಸೆ ಕಾರ್ಮಿಕರು ತಮ್ಮ ರಾಜ್ಯಗಳಿಗೆ ತೆರಳಲು ಅನುಕೂಲವಾಗುವಂತೆ ವಿಶೇಷ ರೈಲುಗಳ ವ್ಯವಸ್ಥೆ ಮಾಡುವ ಕುರಿತಂತೆ ಚಿಂತನೆ ನಡೆದಿದ್ದು, ಪ್ರಯಾಣದ ವೇಳೆ ಈ ಕಾರ್ಮಿಕರುಗಳಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ನೀಡುವ ಜೊತೆಗೆ ರೈಲಿನಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ವ್ಯವಸ್ಥೆ ಮಾಡಲು ಸಮಾಲೋಚನೆ ನಡೆದಿದೆ.

ಎಲ್ಲವೂ ಅಂದುಕೊಂಡಂತೆ ನಡೆದರೆ ಶೀಘ್ರದಲ್ಲೇ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ವಿಶೇಷ ರೈಲುಗಳು ಸೀಮಿತ ಅವಧಿಗೆ ಕೆಲವೊಂದು ಮುಖ್ಯ ನಗರಗಳ ನಡುವೆ ಸಂಚರಿಸುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...