alex Certify ವಿಮಾನ ಅಪಘಾತ ಪ್ರಕರಣ: ಇಬ್ಬರಿಗೆ ಕೊರೊನಾ, 50 ರಕ್ಷಣಾ ಸಿಬ್ಬಂದಿ ಕ್ವಾರಂಟೈನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಮಾನ ಅಪಘಾತ ಪ್ರಕರಣ: ಇಬ್ಬರಿಗೆ ಕೊರೊನಾ, 50 ರಕ್ಷಣಾ ಸಿಬ್ಬಂದಿ ಕ್ವಾರಂಟೈನ್

ಕೇರಳದಲ್ಲಿ ನಿನ್ನ ಅಪಘಾತಕ್ಕೊಳಗಾದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರಿಗೆ ಕೊರೊನಾ ಇರುವುದು ದೃಢಪಟ್ಟಿದೆ. ದುಬೈನಿಂದ ಬಂದ ಪ್ರಯಾಣಿಕರಲ್ಲಿ ಇಬ್ಬರಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಅದ್ರಲ್ಲಿ 45 ವರ್ಷದ ಸುದೀರ್ ಎಂಬಾತ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ.

ಪ್ರಯಾಣಿಕರನ್ನು ಬೇರೆ ಬೇರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರಿಗೂ ಕೊರೊನಾ ಪರೀಕ್ಷೆ ನಡೆಯುತ್ತಿದೆ. ಕೊರೊನಾ ಪ್ರೋಟೋಕಾಲ್ ಅಡಿಯಲ್ಲಿ ಶವಗಳ ಅಂತ್ಯಕ್ರಿಯೆ ನಡೆಯಲಿದೆ. ವಿಮಾನ ಅಪಘಾತಕ್ಕೊಳಗಾಗ್ತಿದ್ದಂತೆ ರಕ್ಷಣೆ ಕಾರ್ಯ ನಡೆದಿತ್ತು. ಇದ್ರಲ್ಲಿ ಪಾಲ್ಗೊಂಡಿದ್ದ 45 ಸಿಬ್ಬಂದಿಗೆ ಕ್ವಾರಂಟೈನ್ ಆಗುವಂತೆ ಸೂಚಿಸಲಾಗಿದೆ. ಅವ್ರೆಲ್ಲರ ಪರೀಕ್ಷೆ ನಿಧಾನವಾಗಿ ನಡೆಯಲಿದೆ. ಅದಕ್ಕೂ ಮುನ್ನ ಕ್ವಾರಂಟೈನ್ ಆಗುವಂತೆ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.

ವಿಮಾನದಲ್ಲಿ 10 ನವಜಾತ ಶಿಶುಗಳು, ಇಬ್ಬರು ಪೈಲಟ್ ಸೇರಿದಂತೆ 184 ಮಂದಿ ಪ್ರಯಾಣ ಬೆಳೆಸಿದ್ದರು. ಅಪಘಾತದಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...