ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾ ವಿರುದ್ಧ ನೇರ ಯುದ್ಧ ನಡೆಸುತ್ತಿರುವ ವೈದ್ಯರು ಮೂರು ತಿಂಗಳಿಂದ ಸಂಬಳ ಪಡೆದಿಲ್ಲ. ಈಗ ವೈದ್ಯರು ಈ ಬಗ್ಗೆ ಧ್ವನಿ ಎತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಉತ್ತರ ದೆಹಲಿ ಮಹಾನಗರ ಪಾಲಿಕೆಯ ವ್ಯಾಪ್ತಿಯ ಆಸ್ಪತ್ರೆಗಳ ವೈದ್ಯರ ಒಕ್ಕೂಟವು ಪ್ರಧಾನ ಮಂತ್ರಿಗೆ ಪತ್ರ ಬರೆದಿದೆ.
ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಶನ್ ಆಸ್ಪತ್ರೆಗಳ ವೈದ್ಯರು ಕಳೆದ ಮೂರು ತಿಂಗಳಿನಿಂದ ತಾವು ವೇತನ ಪಡೆದಿಲ್ಲ ಎಂದು ಪತ್ರದಲ್ಲಿ ಹೇಳಿದ್ದಾರೆ. ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ತುಂಬಾ ಒತ್ತಡದ ಸ್ಥಿತಿಯಲ್ಲಿ ಕೆಲಸ ಮಾಡುತ್ತಿದ್ದೇವೆ. ಈ ಪತ್ರವನ್ನು ಮುನ್ಸಿಪಲ್ ಕಾರ್ಪೊರೇಷನ್ ವೈದ್ಯರ ಸಂಘವು ಕಳೆದ ವಾರ ಇ-ಮೇಲ್ ಮೂಲಕ ಕಳುಹಿಸಿದೆ.
ಉತ್ತರ ದೆಹಲಿ ಮಹಾನಗರ ಪಾಲಿಕೆ ಈ ಬಗ್ಗೆ ಯಾವುದೇ ಉತ್ತರ ನೀಡಿಲ್ಲ. ಕೊರೊನಾ ವಾರಿಯರ್ ಅನಾರೋಗ್ಯದಿಂದ ಬಳಲುತ್ತಿದ್ದರೆ ಫೈವ್ ಸ್ಟಾರ್ನಲ್ಲಿ ಚಿಕಿತ್ಸೆ ನೀಡಲು ಸಿಎಂ ಕೇಜ್ರಿವಾಲ್ ವ್ಯವಸ್ಥೆ ಮಾಡಿದ್ದಾರೆ.