alex Certify ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಿಗೊಂದು ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಿಗೊಂದು ಮುಖ್ಯ ಮಾಹಿತಿ

ದೇಶದಾದ್ಯಂತ ಕೊರೊನಾ ಎರಡನೇ ಅಲೆ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಹಲವು ನಿರ್ಬಂಧಗಳನ್ನು ಹೇರಲಾಗುತ್ತಿದೆ‌. ಇದರ ಮಧ್ಯೆ ವಿಷು ಹಬ್ಬದ ಪ್ರಯುಕ್ತ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲವನ್ನು ಏಪ್ರಿಲ್ 10 ರಿಂದ 8 ದಿನಗಳ ಕಾಲ ತೆರೆಯಲಾಗುತ್ತಿದೆ.

ಈ ಕುರಿತು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದ್ದು, ಕೋವಿಡ್ ನಿಯಮಾನುಸಾರ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ತಿಳಿಸಲಾಗಿದೆ. ಪ್ರತಿದಿನ 10 ಸಾವಿರ ಮಂದಿಗೆ ದರ್ಶನಕ್ಕೆ ಅವಕಾಶ ಸಿಗಲಿದೆ ಎಂದು ಹೇಳಲಾಗಿದೆ.

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್: ಸುಗ್ರೀವಾಜ್ಞೆ ಜಾರಿ ಸಾಧ್ಯತೆ

ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಬರುವ ಭಕ್ತರು ಆರ್ ಟಿ – ಪಿಸಿಆರ್ ನೆಗೆಟಿವ್ ವರದಿಯನ್ನು ತರುವುದು ಕಡ್ಡಾಯವಾಗಿದ್ದು, ಏಪ್ರಿಲ್ 18ರ ರಾತ್ರಿ ಪೂಜೆಯ ಬಳಿಕ 9 ಗಂಟೆಗೆ ದೇವಾಲಯವನ್ನು ಮತ್ತೆ ಮುಚ್ಚಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...