ದೇಶದಲ್ಲಿ ಲಾಕ್ ಡೌನ್ ಜಾರಿಯಾದ ಕಾರಣ ಕೂಲಿ ಕಾರ್ಮಿಕರು ಬೇರೆ ಪ್ರದೇಶಗಳಲ್ಲಿ ಸಿಕ್ಕಿಬಿದ್ದಿದ್ದಾರೆ. ಅವರನ್ನು ಮನೆಗೆ ತಲುಪಿಸುವ ಕಾರ್ಯ ಶುರುವಾಗಿದೆ. ತೆಲಂಗಾಣದ ಲಿಂಗಮಪೆಲ್ಲಿಯಲ್ಲಿ ಸಿಕ್ಕಿಬಿದ್ದಿದ್ದ ಕಾರ್ಮಿಕರನ್ನು ಊರು ತಲುಪಿಸಲು ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ. ರೈಲು ಇಂದು ರಾತ್ರಿ ಜಾರ್ಖಂಡ್ ತಲುಪಲಿದೆ.
ಕಾರ್ಮಿಕರನ್ನು ಮರಳಿ ಕರೆತರಲು ವಿಶೇಷ ರೈಲು ವ್ಯವಸ್ಥೆ ಮಾಡುವಂತೆ ಅನೇಕ ರಾಜ್ಯ ಸರ್ಕಾರಗಳು ಕೇಂದ್ರಕ್ಕೆ ಮನವಿ ಮಾಡಿವೆ. ತೆಲಂಗಾಣದಿಂದ ಹೊರಟ ರೈಲಿನಲ್ಲಿ 24 ಬೋಗಿಗಳಿದ್ದು, ಅನೇಕ ಕಾರ್ಮಿಕರು ತವರಿಗೆ ವಾಪಸ್ ಆಗ್ತಿದ್ದಾರೆ. ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿಲ್ಲ. ರಾಜ್ಯ ಸರ್ಕಾರದ ಮನವಿ ಮೇರೆಗೆ ಈ ರೈಲನ್ನು ಬಿಡಲಾಗ್ತಿದೆ.
ರೈಲಿನಲ್ಲಿ ಸುರಕ್ಷತೆಯ ಎಲ್ಲ ನಿಯಮಗಳನ್ನು ಪಾಲಿಸಲಾಗಿದೆ. ದೇಶದಲ್ಲಿ ಲಾಕ್ ಡೌನ್ ವೇಳೆ ಕಾರ್ಮಿಕರನ್ನು ಕರೆದೊಯ್ಯುತ್ತಿರುವ ಮೊದಲ ರೈಲು ಇದಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ರೈಲು ಬಿಡುವ ನಿರೀಕ್ಷೆಯಿದೆ.