alex Certify ಸಿಎಂ ಮಮತಾ ಭಾಷಣ ಆರಂಭಿಸುತ್ತಿದ್ದಂತೆ ಜೈ ಶ್ರೀರಾಮ್ ಘೋಷಣೆ: ಭಾಷಣ ಮಾಡದೇ ವಾಪಸ್ ಆದ ದೀದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಮಮತಾ ಭಾಷಣ ಆರಂಭಿಸುತ್ತಿದ್ದಂತೆ ಜೈ ಶ್ರೀರಾಮ್ ಘೋಷಣೆ: ಭಾಷಣ ಮಾಡದೇ ವಾಪಸ್ ಆದ ದೀದಿ

ಕೋಲ್ಕತ್ತಾ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆ ಅಂಗವಾಗಿ ಕೋಲ್ಕತ್ತಾದ ವಿಕ್ಟೋರಿಯಾ ಮೆಮೋರಿಯಲ್ ಹಾಲ್ ನಲ್ಲಿ ಪರಾಕ್ರಮ್ ದಿವಸ್ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಮಗೆ ವೇದಿಕೆ ಮೆಲೆ ಅಪಮಾನ ಮಾಡಿದ್ದಾರೆ ಎಂದು ಭಾಷಣ ಮಾಡದೇ ವಾಪಸ್ ಆಗಿರುವ ಘಟನೆ ನಡೆದಿದೆ.

ವಿಕ್ಟೋರಿಯಾ ಮೆಮೊರಿಯಲ್ ಹಾಲ್ ನಲ್ಲಿ ನಡೆದ ಪರಾಕ್ರಮ್ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಭಾಗವಹಿಸಿದ್ದು, ಮೋದಿ ಭಾಷಣ ಮುಗಿಯುತ್ತಿದ್ದಂತೆಯೇ ಸಿಎಂ ಮಮತಾ ಬ್ಯಾನರ್ಜಿ ಭಾಷಣ ಆರಂಭಿಸಿದ್ದರು. ದೀದಿ ಭಾಷಣ ಆರಂಭಿಸುತ್ತಿದ್ದಂತೆಯೇ ಜೈ ಶ್ರೀರಾಮ್ ಘೋಷಣೆ ಕೂಗಲಾಯಿತು. ಇದರಿಂದ ಸಿಡಿದೆದ್ದ ದೀದಿ ವಾಗ್ದಾಳಿ ನಡೆಸಿದ್ದಾರೆ.

ಇದು ಸರ್ಕಾರಿ ಕಾರ್ಯಕ್ರಮ ಹೊರತು ಯಾವುದೇ ರಾಜಕೀಯ ಪಕ್ಷದ ಕಾರ್ಯಕ್ರಮವಲ್ಲ. ಸರ್ಕಾರಿ ಕಾರ್ಯಕ್ರಮಕ್ಕೆ ಅದರದ್ದೇ ಆದ ಗೌರವವಿರುತ್ತದೆ. ಕಾರ್ಯಕ್ರಮಕ್ಕೆ ಆಹ್ವಾನಿಸಿ ಈ ರೀತಿ ಅಪಮಾನ ಮಾಡುವುದು ನಿಮಗೆ ಸರಿಯೇ? ಎಂದು ಗುಡುಗಿದ್ದಾರೆ. ಬಳಿಕ ಭಾಷಣ ಮಾಡದೆಯೇ ಮಮತಾ ಬ್ಯಾನರ್ಜಿ ವೇದಿಕೆಯಿಂದ ನಿರ್ಗಮಿಸಿರುವ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...