ದೇಶದಲ್ಲಿ ಮಾರಕ ಮಹಾಮಾರಿ ಕೊರೊನಾ ಅಬ್ಬರಿಸುತ್ತಿದ್ದು, ಇದಕ್ಕೆ ಈಗಾಗಲೇ 5 ಸಾವಿರಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ದಿನೇ ದಿನೇ ಸೋಂಕು ಪೀಡಿತರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹಿರಿಯ ನಾಗರಿಕರಿಗೆ ಮಹತ್ವದ ಸೂಚನೆ ನೀಡಿದೆ.
ಕೊರೊನಾ ಸೋಂಕಿನಿಂದ ಮೃತಪಡುತ್ತಿರುವವರ ಪೈಕಿ ಇಬ್ಬರಲ್ಲಿ ಒಬ್ಬರು ಹಿರಿಯ ನಾಗರಿಕರಾಗಿದ್ದು, ಈ ಹಿನ್ನಲೆಯಲ್ಲಿ ಅನಗತ್ಯವಾಗಿ ಮನೆಯಿಂದ ಹೊರ ಬಾರದಂತೆ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಅಲ್ಲದೇ ಮಧುಮೇಹ, ರಕ್ತದೊತ್ತಡ, ಹೃದ್ರೋಗ, ಉಸಿರಾಟದ ಸಮಸ್ಯೆ ಇರುವವರೂ ಕೂಡ ಸುರಕ್ಷತೆ ಕೈಗೊಳ್ಳುವುದು ಅವಶ್ಯಕವಾಗಿದ್ದು, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವತ್ತ ಗಮನ ಹರಿಸುವಂತೆ ತಿಳಿಸಲಾಗಿದೆ.