ಮುಂಬೈ: ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ಭೀಕರ ರೈಲು ದುರಂತ ಸಂಭವಿಸಿದ್ದು ಗೂಡ್ಸ್ ರೈಲ್ ಹರಿದ ಪರಿಣಾಮ 17 ಮಂದಿ ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಜುಲಾನದಲ್ಲಿರುವ ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ ನಿಗಮದ ವಲಯದಲ್ಲಿ ಇವರು ಕೆಲಸ ಮಾಡುತ್ತಿದ್ದು ಲಾಕ್ಡೌನ್ ನಡುವೆ ಊರಿಗೆ ಹೋಗಲು ಸಜ್ಜಾಗಿದ್ದರು. ಮಾಹಿತಿಯ ಪ್ರಕಾರ ವಲಸೆ ಕಾರ್ಮಿಕರು ರೈಲ್ವೇ ಟ್ರ್ಯಾಕ್ ನಲ್ಲಿ ಮಲಗಿದ್ದರು.
ಈ ವೇಳೆ ಗೂಡ್ಸ್ ರೈಲು ಅದೇ ಟ್ರ್ಯಾಕ್ ನಲ್ಲಿ ಹರಿದ ಪರಿಣಾಮ 17 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಕರ್ಮದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು ರೈಲ್ವೆ ಪೊಲೀಸ್ ಪಡೆ ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.