ನವದೆಹಲಿ: ಈಗಾಗಲೇ ಶ್ರಮಿಕ್ ರೈಲುಗಳು ಮತ್ತು ವಿಶೇಷ ರೈಲುಗಳ ಸಂಚಾರ ಆರಂಭವಾಗಿದ್ದು, ಜೂನ್ 1 ರಿಂದ 200 ಮೇಲ್ ಎಕ್ಸ್ ಪ್ರೆಸ್ ಟ್ರೈನ್ ಗಳ ಸಂಚಾರ ಆರಂಭವಾಗಲಿದೆ.
ರೈಲ್ವೆ ಮಂಡಳಿ ಅಧ್ಯಕ್ಷ ವಿನೋದ್ ಕುಮಾರ್ ಯಾದವ್ ಈ ಕುರಿತು ಮಾಹಿತಿ ನೀಡಿದ್ದು, ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತರಲು ರೈಲ್ವೆ ಸಚಿವಾಲಯ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.
ವಲಸೆ ಕಾರ್ಮಿಕರು ಊರಿಗೆ ಹೋಗಲು ಅನುಕೂಲವಾಗುವಂತೆ ಶ್ರಮಿಕ ರೈಲುಗಳ ಸಂಚಾರ ಮುಂದುವರೆದಿದೆ. ಮೇ 1 ರಿಂದಲೇ ವಲಸೆ ಕಾರ್ಮಿಕರಿಗಾಗಿ ಶ್ರಮಿಕ್ ರೈಲುಗಳ ವ್ಯವಸ್ಥೆ ಮಾಡಲಾಗಿದೆ. ಪ್ರಯಾಣಿಕರಿಗೆ ಉಚಿತವಾಗಿ ಊಟ, ಮತ್ತು ಕುಡಿಯುವ ನೀರನ್ನು ಒದಗಿಸಲಾಗಿದೆ ಎಂದು ತಿಳಿಸಿದ್ದಾರೆ.
ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಹಲವು ನಿಯಮಗಳನ್ನು ಪಾಲಿಸುವುದು ಸೇರಿದಂತೆ ಹಲವು ನಿಯಮಗಳನ್ನು ಪಾಲಿಸುವ ಮೂಲಕ ರೈಲ್ವೆ ಸಚಿವಾಲಯ ಜೂನ್ 1 ರಿಂದ 200 ಮೇಲ್ ಎಕ್ಸ್ ಪ್ರೆಸ್ ಟ್ರೈನ್ ಗಳ ಕಾರ್ಯಾಚರಣೆಗಿಳಿಸಲು ಕ್ರಮಕೈಗೊಂಡಿದೆ. ಈ ಮೂಲಕ ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತರಲು ಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.