alex Certify ಪ್ರೀತಿ ನಿರಾಕರಿಸಿದ ನರ್ಸ್ ಗೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟ ಪಾಪಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೀತಿ ನಿರಾಕರಿಸಿದ ನರ್ಸ್ ಗೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟ ಪಾಪಿ

ಹೈದರಾಬಾದ್: ಪ್ರೀತಿ ನಿರಾಕರಿಸಿದ್ದ ನರ್ಸ್ ಮೇಲೆ ಪಾಗಲ್ ಪ್ರೇಮಿಯೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದಾರುಣ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ.

ಇಲ್ಲಿನ ಹನುಮಾನ್ ಪೇಟೆಯಲ್ಲಿ ನಾಗಭೂಷಣ್ ಎಂಬ ಪಾಗಲ್ ಪ್ರೇಮಿ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದ ಚಿನ್ನಾರಿ ಎಂಬ ಯುವತಿಯನ್ನು ಪ್ರೀತಿಸುವಂತೆ ಹಲವು ದಿನಗಳಿಂದ ಪೀಡಿಸುತ್ತಿದ್ದ. ಆದರೆ ಯುವತಿ ಒಪ್ಪಿರಲಿಲ್ಲ. ನಾಗಭೂಷಣ್ ಕಾಟ ತಡೆಯಲಾಗದೇ ಯುವತಿ ಪೊಲೀಸರಿಗೆ ದೂರು ನೀಡಿದ್ದಳು. ಪೊಲೀಸರು ನಾಗಭೂಷಣ್ ಗೆ ಎಚ್ಚರಿಕೆ ನೀಡಿ ಕಳುಹಿಸಿದ್ದರು.

ಇಷ್ಟಾದರೂ ಸುಮ್ಮನಾಗದ ನಾಗಭೂಷಣ್, ನಿನ್ನೆ ರಾತ್ರಿ ಯುವತಿಯ ಮನೆಗೆ ಬಂದು ಮಾತನಾಡಬೇಕು ಎಂದು ಹೇಳಿದ್ದಾನೆ. ಮಾತನಾಡಲು ಒಪ್ಪದಿದ್ದಾಗ ಏಕಾಏಕಿ ಯುವತಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಘಟನೆಯಲ್ಲಿ ಯುವತಿ ಸಜೀವ ದಹನಗೊಂಡಿದ್ದಾಳೆ. ಪಾಗಲ್ ಪ್ರೇಮಿ ನಾಗಭೂಷಣ್ ಗೂ ಗಂಭೀರವಾದ ಸುಟ್ಟಗಾಯಗಳಾಗಿದ್ದು. ಆಸ್ಪತ್ರೆಗೆ ದಾಖಲಾಗಿದ್ದಾನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...