ವಿಜಯವಾಡ: ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಅವರು ‘ವೈಎಸ್ಆರ್ ಶೂನ್ಯ ಬಡ್ಡಿ ಸಾಲ ಯೋಜನೆ’ಯನ್ನು ಆರಂಭಿಸಿದ್ದಾರೆ.
ಕೋರೋನಾ ಸಂಕಷ್ಟದ ಸಮಯದಲ್ಲಿ 8.78 ಲಕ್ಷ ಗುಂಪುಗಳ ಬ್ಯಾಂಕ್ ಖಾತೆಗಳಿಗೆ 1400 ಕೋಟಿ ರೂಪಾಯಿ ಜಮಾ ಮಾಡಲಾಗಿದ್ದು, ಇದರಿಂದ 91 ಲಕ್ಷ ಮಹಿಳೆಯರಿಗೆ ಅನುಕೂಲವಾಗಲಿದೆ. ‘ವೈಎಸ್ಆರ್ ಶೂನ್ಯ ಬಡ್ಡಿ ಸಾಲ ಯೋಜನೆ’ ಮೂಲಕ ಪ್ರತಿ ಸ್ವಸಹಾಯ ಸಂಘಕ್ಕೆ ಬಡ್ಡಿ ಇಲ್ಲದೆ 20 ರಿಂದ 40 ಸಾವಿರ ರೂಪಾಯಿವರೆಗೆ ಸಾಲ ಸೌಲಭ್ಯ ಸಿಗಲಿದೆ.
ತಡಪಲ್ಲಿಯ ಸಿಎಂ ಕಚೇರಿಯಿಂದ ಮಹಿಳೆಯರೊಂದಿಗೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಸಂವಾದ ನಡೆಸಿದ ಸಿಎಂ ಜಗನ್ ಮೋಹನ್, ಯೋಜನೆಯಡಿ ಮಹಿಳಾ ಉದ್ಯಮಿಗಳಿಗೆ ಆರ್ಥಿಕ ನೆರವು ನೀಡಲು ಸರ್ಕಾರ ನಿರ್ಧರಿಸಿದೆ. ಈ ಮೊದಲೇ ಘೋಷಣೆ ಮಾಡಿರುವಂತೆ ಮಹಿಳೆಯರ ಹೆಸರಿನಲ್ಲಿ ಮನೆಗಳ ನೋಂದಣಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.