alex Certify ಕೊರೊನಾ ಹೊತ್ತಲ್ಲೇ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ: ಶೃಂಗಾರಗೊಂಡ ಅಯೋಧ್ಯೆಯಲ್ಲಿ ಸರ್ಪಗಾವಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಹೊತ್ತಲ್ಲೇ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ: ಶೃಂಗಾರಗೊಂಡ ಅಯೋಧ್ಯೆಯಲ್ಲಿ ಸರ್ಪಗಾವಲು

ಅಯೋಧ್ಯೆ: ಆಗಸ್ಟ್ 5 ರಂದು ರಾಮಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಅಯೋಧ್ಯೆ ನಗರದಲ್ಲಿ ಮಹಾಮಾರಿ ಕೊರೊನಾ ಸೋಂಕು ಆತಂಕ ಮೂಡಿಸಿದೆ. ಕೆಲವು ಅರ್ಚಕರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಎಲ್ಲಾ ಅರ್ಚಕರಿಗೂ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಲಾಗಿದೆ. ಪ್ರಧಾನಿ ಭದ್ರತೆಗೆ ನಿಯೋಜಿಸುವ ಸಿಬ್ಬಂದಿಗೂ ಕೊರೋನಾ ಪರೀಕ್ಷೆ ಕಡ್ಡಾಯ ಮಾಡಲಾಗಿದೆ.

ಪ್ರಧಾನಿ ಆಗಮನ, ಉಗ್ರರ ಭೀತಿ ಹಾಗೂ ಕೊರೊನಾ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಮುನ್ನೆಚ್ಚರಿಕೆ ಕ್ರಮ, ಬಿಗಿಭದ್ರತೆಯೊಂದಿಗೆ ಕಾರ್ಯಕ್ರಮ ಯೋಜನೆಗೆ ಸಿದ್ಧತೆ ಕೈಗೊಳ್ಳಲಾಗಿದೆ. ಅಯೋಧ್ಯೆ ನಗರ ಭೂಮಿ ಪೂಜೆ ಸಮಾರಂಭಕ್ಕೆ ಶೃಂಗಾರಗೊಂಡಿದೆ. ಶ್ರೀರಾಮ ಜನ್ಮಭೂಮಿಗೆ ತೆರಳುವ ಮಾರ್ಗಗಳನ್ನು ಅಲಂಕರಿಸಲಾಗಿದೆ. ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಅಖಂಡ ರಾಮಾಯಣ ಪಾರಾಯಣ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...