ಕೊರೊನಾ ನಿಯಂತ್ರಣಕ್ಕೆ ದೆಹಲಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
ಒಂದು ವಾರಗಳ ಕಾಲ ದೆಹಲಿಯ ಎಲ್ಲ ಗಡಿ ಬಂದ್ ಆಗಲಿದೆ. ಬೇರೆ ರಾಜ್ಯಗಳಿಂದ ದೆಹಲಿಗೆ ಬರಲು ಸಾಧ್ಯವಿಲ್ಲವೆಂದು ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಒಂದು ವಾರದವರೆಗೆ ಎಲ್ಲ ಗಡಿ ಬಂದ್ ಆಗಲಿದೆ. ನಂತ್ರ ಜನರ ಅಭಿಪ್ರಾಯದ ಮೇಲೆ ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ಅವರು ಹೇಳಿದ್ದಾರೆ.
ಈ ಬಗ್ಗೆ ತಮ್ಮ ಅಭಿಪ್ರಾಯ ನೀಡಲು ಜನರಿಗೆ ಅವಕಾಶ ನೀಡಲಾಗಿದೆ. ಫೋನ್ ಮೂಲಕ, ಎಸ್ಎಂಎಸ್ ಮೂಲಕ ಅಥವಾ ಇಮೇಲ್ ಮೂಲಕ ತಮ್ಮ ಅಭಿಪ್ರಾಯ ತಿಳಿಸಬಹುದು. ಇಂದಿನಿಂದ ದೆಹಲಿ ಚಿತ್ರಣ ಬದಲಾಗಿದೆ. ಲಾಕ್ ಡೌನ್ 5ರಲ್ಲಿ ಕೆಲವೊಂದು ನಿಯಮಗಳ ಸಡಿಲಿಕೆ ಮಾಡಲಾಗಿದೆ.
ದೆಹಲಿಯಲ್ಲಿ ಎಲ್ಲಾ ಅಂಗಡಿಗಳನ್ನು ತೆರೆಯುವುದಾಗಿ ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ. ದೆಹಲಿಯಲ್ಲೂ ಸಲೂನ್ ಅಂಗಡಿಗಳನ್ನು ತೆರೆಯಲಾಗುವುದು ಎಂದು ಸಿಎಂ ಹೇಳಿದ್ದಾರೆ.