alex Certify BIG NEWS: ಕಚ್ಚಾ ಬಾಂಬ್ ಸ್ಫೋಟ – ಮಗು ಸೇರಿ ಮೂವರ ಸ್ಥಿತಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಚ್ಚಾ ಬಾಂಬ್ ಸ್ಫೋಟ – ಮಗು ಸೇರಿ ಮೂವರ ಸ್ಥಿತಿ ಗಂಭೀರ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಅಖಾಡ ರಂಗೇರಿದ್ದು, ಈ ನಡುವೆ ಕಚ್ಚಾ ಬಾಂಬ್ ಸ್ಫೋಟ ಪ್ರಕರಣಗಳೂ ಹೆಚ್ಚುತ್ತಿವೆ. ಪಶ್ಚಿಮ ಬಂಗಾಳದ ಉತ್ತರ 24 ಪರಗಣಾಸ್ ಜಿಲ್ಲೆಯಲ್ಲಿ ನಡೆದ ಕಚ್ಚಾ ಬಾಂಬ್ ಸ್ಫೋಟದಲ್ಲಿ ಮಗು ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದುಷ್ಕರ್ಮಿಗಳು ಕಚ್ಚಾ ಬಾಂಬ್ ಸ್ಫೋಟಿಸಿದ್ದು, ಗಾಲಿ ನಂ.17 ಬಳಿ ಈ ಘಟನೆ ನಡೆದಿದೆ. ಬಾಂಬ್ ಸ್ಫೋಟಗೊಂಡ ಸ್ಥಳದಿಂದ ಬಿಜೆಪಿ ಸಂಸದ ಅರ್ಜುನ್ ಸಿಂಗ್ ನಿವಾಸ ಸಮೀಪದಲ್ಲಿದೆ ಎನ್ನಲಾಗಿದೆ.

ಒಂದೇ ರೆಸ್ಟೋರೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದ ಸಹೋದ್ಯೋಗಿಗಳ ನಡುವಿನ ಸಂಬಂಧ DNA ಪರೀಕ್ಷೆಯಲ್ಲಿ ಬಹಿರಂಗ

ದುಷ್ಕರ್ಮಿಗಳು ಒಟ್ಟು 15 ಸ್ಥಳಗಳಲ್ಲಿ ಕಚ್ಚಾ ಬಾಂಬ್ ಎಸೆದಿದ್ದಾರೆ. ಕೃತ್ಯಕ್ಕೂ ಮುನ್ನ ಸಿಸಿ ಟಿವಿ ಕ್ಯಾಮರಾಗಳನ್ನು ಧ್ವಂಸ ಮಾಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...